Home / ಕವನ / ಕವಿತೆ / ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಕ್ಯಾತೆ ತೆಗೆದಿತ್ತು
ಜೀವನ ಸಾವ ಜೊತೆಗೆ
ಶ್ರೇಷ್ಠರಾರು ? ಪ್ರಶ್ನೆಯೆತ್ತಿಕೊಂಡು
ತುಸು ಗಂಭೀರವಾಗಿಯೇ !

ಜೀವನ, ನಾನು ಮೊದಲು !
ಜೀವ-ಜೀವಕ್ಕೆ, ಜಡ-ಜಡಕ್ಕೆ, ಕಾಲ-ಕಾಲಕ್ಕೆ
ಭಿನ್ನ! ಭಿನ್ನ! ರಂಗು! ರಂಗು!
ಬೆಳಕು; ಸಂತಸ.

ಕರುಣಿಸುವೆನು
ಅಂಗಳದಿ ಸೋಲು, ಗೆಲುವು, ಸಮಾಧಾನ;
ತಮ್ಮ, ತಮ್ಮ ಗುಣಾವಗುಣ,
ಅಭಿರುಚಿ, ಅನುಕೂಲ, ಶಕ್ತಿ, ದೌರ್ಬಲ್ಯಗಳಿಗೆ ತಕ್ಕಂತೆ.

ತುಡಿಸುವೆನು
ನನ್ನ ಪಂದ್ಯದಲಿರಲು
ಎಲ್ಲವನು ಎಲ್ಲರನು ಸದಾ!
ಜೀವಂತಿಕೆಯೇ ನನ್ನ ಹೂರಣ.

ಮಾಡುವೆನು ಅದಲು, ಬದಲು
ನಿಧಾನವಾಗಿ, ವೇಗವಾಗಿ, ಬೇಕಾದ ಹಾಗೆ!
ನೆಚ್ಚದಂತೆ.
ನಿಲ್ಲಿಸೆನು ಯಾವುದನೂ ಒಂದೇ ಸ್ತರದಲಿ
ಕೆಲ, ಕೆಲವರನು ಬಿಟ್ಟು,

ನಾನು ವಿಕ್ಷಿಪ್ತನಲ್ಲ!
ಹುಟ್ಟಿ ಬರುವ ಎಲ್ಲಕ್ಕೂ ಎಲ್ಲರಿಗೂ ಸಲ್ಲುವೆನು
ನನ್ನಲ್ಲಿ ಅರಳಿ ಬೆಳೆದವರು ಸಾವ ಗೆಲುವರು
ಉಳಿಯುವರು; ಬೆಳಗುವರು
ಚರಿತ್ರೆಯಲಿ ಚಿರಕಾಲ.

ನಾನು ಸಾವು,
ಭಯ! ನೋವು! ಕತ್ತಲು! ಮೌನ!
ಸತ್ಯ! ಸಾರ್ವತ್ರಿಕ! ಬಿಡುಗಡೆ!!

ನನಗೆ ಸ್ವಾಗತವಿಲ್ಲ; ಆರಾಧನೆಯಿಲ್ಲ
ಯಾರೂ… ತಾವೇ ಬಂದು ಬೀಳರು
ನನ್ನ ಮಡಿಲಿಗೆ
ಬಹಳ ಬದುಕಲರಿಯದವರು; ಧೀರರು ವಿನಃ.

ಶರಣು!
ಸತ್ತು ಬದುಕುವ ಗೆದ್ದವರಿಗೆ
ನಾನು, ಈಗ… ಆಗ… ಯಾವಾಗ ಬೇಕಾದರೂ…
ಯಾವರೂಪದಲ್ಲಾದರೂ…
ಬಂದೆರಗಬಹುದು; ಮುಗಿಸಬಹುದು.
ಸತ್ಯವಿದನು ತಿಳಿದೂ… ತಿಳಿದೂ
ಏನು ನಿಲ್ಲಿಸದೆ ಎಲ್ಲವನು ಮಾಮೂಲಾಗಿ
ಮುಂದುವರಿಸುವ
ಜೀವ ವಿಶೇಷರಿಗೆ.

ಹುಟ್ಹುಟ್ಟಿ ಬರುವ
ಜೀವದಲೆ ಎಲೆಗಳು ಬಾಳಿ
ಹಣ್ಣಾಗಿ ಉದುರಬೇಕು
ಚಿಗುರಾಗಿ ಮೂಡಬೇಕು; ಬೆಳೆಯಬೇಕು
ಬಾಳೆಂಬ ತೇರು ತರು ಹೊಸ ಹೊಸದಾಗಿ
ಸಿಂಗಾರಗೊಳಬೇಕು
ಅರ್ಥಪೂರ್ಣವಾಗಬೇಕು.

ಇದು ನ್ಯಾಯ! ಸರ್ವ ಸಮ್ಮತ !
ಜಗದಲಿ ಶ್ರೇಷ್ಠ, ಕನಿಷ್ಠ ಪ್ರಶ್ನೆಯೇ ಅಸಂಗತ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...