ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಕ್ಯಾತೆ ತೆಗೆದಿತ್ತು
ಜೀವನ ಸಾವ ಜೊತೆಗೆ
ಶ್ರೇಷ್ಠರಾರು ? ಪ್ರಶ್ನೆಯೆತ್ತಿಕೊಂಡು
ತುಸು ಗಂಭೀರವಾಗಿಯೇ !

ಜೀವನ, ನಾನು ಮೊದಲು !
ಜೀವ-ಜೀವಕ್ಕೆ, ಜಡ-ಜಡಕ್ಕೆ, ಕಾಲ-ಕಾಲಕ್ಕೆ
ಭಿನ್ನ! ಭಿನ್ನ! ರಂಗು! ರಂಗು!
ಬೆಳಕು; ಸಂತಸ.

ಕರುಣಿಸುವೆನು
ಅಂಗಳದಿ ಸೋಲು, ಗೆಲುವು, ಸಮಾಧಾನ;
ತಮ್ಮ, ತಮ್ಮ ಗುಣಾವಗುಣ,
ಅಭಿರುಚಿ, ಅನುಕೂಲ, ಶಕ್ತಿ, ದೌರ್ಬಲ್ಯಗಳಿಗೆ ತಕ್ಕಂತೆ.

ತುಡಿಸುವೆನು
ನನ್ನ ಪಂದ್ಯದಲಿರಲು
ಎಲ್ಲವನು ಎಲ್ಲರನು ಸದಾ!
ಜೀವಂತಿಕೆಯೇ ನನ್ನ ಹೂರಣ.

ಮಾಡುವೆನು ಅದಲು, ಬದಲು
ನಿಧಾನವಾಗಿ, ವೇಗವಾಗಿ, ಬೇಕಾದ ಹಾಗೆ!
ನೆಚ್ಚದಂತೆ.
ನಿಲ್ಲಿಸೆನು ಯಾವುದನೂ ಒಂದೇ ಸ್ತರದಲಿ
ಕೆಲ, ಕೆಲವರನು ಬಿಟ್ಟು,

ನಾನು ವಿಕ್ಷಿಪ್ತನಲ್ಲ!
ಹುಟ್ಟಿ ಬರುವ ಎಲ್ಲಕ್ಕೂ ಎಲ್ಲರಿಗೂ ಸಲ್ಲುವೆನು
ನನ್ನಲ್ಲಿ ಅರಳಿ ಬೆಳೆದವರು ಸಾವ ಗೆಲುವರು
ಉಳಿಯುವರು; ಬೆಳಗುವರು
ಚರಿತ್ರೆಯಲಿ ಚಿರಕಾಲ.

ನಾನು ಸಾವು,
ಭಯ! ನೋವು! ಕತ್ತಲು! ಮೌನ!
ಸತ್ಯ! ಸಾರ್ವತ್ರಿಕ! ಬಿಡುಗಡೆ!!

ನನಗೆ ಸ್ವಾಗತವಿಲ್ಲ; ಆರಾಧನೆಯಿಲ್ಲ
ಯಾರೂ… ತಾವೇ ಬಂದು ಬೀಳರು
ನನ್ನ ಮಡಿಲಿಗೆ
ಬಹಳ ಬದುಕಲರಿಯದವರು; ಧೀರರು ವಿನಃ.

ಶರಣು!
ಸತ್ತು ಬದುಕುವ ಗೆದ್ದವರಿಗೆ
ನಾನು, ಈಗ… ಆಗ… ಯಾವಾಗ ಬೇಕಾದರೂ…
ಯಾವರೂಪದಲ್ಲಾದರೂ…
ಬಂದೆರಗಬಹುದು; ಮುಗಿಸಬಹುದು.
ಸತ್ಯವಿದನು ತಿಳಿದೂ… ತಿಳಿದೂ
ಏನು ನಿಲ್ಲಿಸದೆ ಎಲ್ಲವನು ಮಾಮೂಲಾಗಿ
ಮುಂದುವರಿಸುವ
ಜೀವ ವಿಶೇಷರಿಗೆ.

ಹುಟ್ಹುಟ್ಟಿ ಬರುವ
ಜೀವದಲೆ ಎಲೆಗಳು ಬಾಳಿ
ಹಣ್ಣಾಗಿ ಉದುರಬೇಕು
ಚಿಗುರಾಗಿ ಮೂಡಬೇಕು; ಬೆಳೆಯಬೇಕು
ಬಾಳೆಂಬ ತೇರು ತರು ಹೊಸ ಹೊಸದಾಗಿ
ಸಿಂಗಾರಗೊಳಬೇಕು
ಅರ್ಥಪೂರ್ಣವಾಗಬೇಕು.

ಇದು ನ್ಯಾಯ! ಸರ್ವ ಸಮ್ಮತ !
ಜಗದಲಿ ಶ್ರೇಷ್ಠ, ಕನಿಷ್ಠ ಪ್ರಶ್ನೆಯೇ ಅಸಂಗತ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೆಲುವಿನ ನಾಡು ಕರುನಾಡು
Next post ಮುತ್ತಿಗೆ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…