Home / ಕವನ / ಕವಿತೆ / ಹದಿನಾಲ್ಕು ವರ್ಷಗಳ ನಂತರ

ಹದಿನಾಲ್ಕು ವರ್ಷಗಳ ನಂತರ

ಹದಿನಾಲ್ಕು ವರುಷಗಳ ಮೇಲೆ
ಸವಿನೆನಪುಗಳ ಬುತ್ತಿಯಲಿ
ಏನೇನೊ ಹಲವು ಕನಸನೆ ಹೊತ್ತು
ಮಣ್ಣ ವಾಸನೆ ಅರಸುತ ಹಳ್ಳಿಗೆ ನಡೆದೆ

ಕರಿಮಣ್ಣಿನ ಏರೆಹೊಲದ ದಿಬ್ಬದಿ
ನನ್ನೂರು ಕಾಣುವ ತವಕದಿ
ಹೆಜ್ಜೆಯ ಮೇಲೆ ಹೆಜ್ಜೆಯಿಡುತ ಇಳಿದಾಗ
ಜುಳು… ಜುಳು… ಹರಿಯುತಿಹಳು
ಕಷ್ಣೆಯುದರದೊಳಗಿನ `ಡೋಣಿ’

ಹದಿನಾಲ್ಕು ವರ್ಷಗಳ ಹಿಂದೆ
ಹೇಗಿತ್ತು ಹಾಗೆ ಇಂದಿಗು ಎಲ್ಲೆಲ್ಲೂ
ಪರಿಚಯದ ಮರುಛಾಯೆ
ಕಣ್ಮುಂದೆ ತುಂಬಿ ಮರುಕಳಿಸಿತ್ತು
ಮನದಿ ಇಲ್ಲುಂಡ ಸುಖವೆಲ್ಲ
ಬಾಲ್ಯದ ಬನವ ತವಕದಲಿ
ಹೊಕ್ಕಾಗ ಎಲ್ಲೆಡೆಗೂ ಹದಿನಾಲ್ಕು ವರ್ಷಗಳ
ಮುದುಡಿದ ಮುದಿ ನೆರಳು ಕವಿದಿತ್ತು

ವರುಣ ದುಬಾರಿಯಾಗಿದ್ದು…
ಎಲ್ಲೆಡೆ ಬಣ… ಬಣ
ನೆಲ ಜಲ – ಮನಗಳು
ನಿಂತ ಮರವಾಗಿದ್ದವು ಒಣಗಿ…

ಹೊಟ್ಟೆಪಾಡಿಗಾಗಿ ಗುಳೆ ಎದ್ದು ಹೋಗಿದ್ದ
ನನ್ನೂರಿನ ಅಣ್ಣ-ತಮ್ಮಂದಿರು
ಅಕ್ಕ-ತಂಗಿಯರು ಕಾಣದ
ಓಣೆಲ್ಲಾ ಮೌನ ಆವರಿಸಿತ್ತು

ಓಡಾಡಿ… ಆಡಿದ
ಬೆಚ್ಚಗಿನ ಮನೆಗಳೆಲ್ಲಾ ನೆಲಕೆ
ಕುಸಿದ ಮಣ್ಣಿನ ಗುಡ್ಡೆಗಳೆಲ್ಲ
ಹುಗಿದಿಟ್ಟುಕೊಂಡ ಬಾಲ್ಯದ ನೆನಪುಗಳೆಲ್ಲಾ
ಬಿದ್ದಿದ್ದವು ಮಾಸಿ ತಬ್ಬಲಿಯಾಗಿ

ಅಂದು ಗಿಜಿ-ಗಿಜಿ ತುಂಬಿದ
ಭೇದವೆಣಿಸದ ಮನಗಳು ಓಣಿಗಳು
ನಿರ್ಜೀವ ಸವೆತದ ಮುದುಡಿದ
ಆ ಹಿರಿಜೀವಗಳ ಅಸಹಾಯಕತೆ ಕಾಣುತ

ಕಣ್ಮುಂದೆ ಕಟ್ಟುತಲಿ
ಜೀವ ಮರಮರನೆ ಬಳಲಿತು
ಅವ್ವ-ಅಪ್ಪ- ಹೋದ
ಅಜ್ಜ-ಮುತ್ತಜ್ಜರು ಹೋದ
ಮನೆ-ಮನ-ಬರಿದಾಗಿತ್ತು

ಆ ಹಿರಿಜೀವಗಳ ಸ್ಪರ್ಶದ
ಪ್ರೀತಿ ಉಂಡ ಬಾಲ್ಯವು
ಅವರೊಡನೆ ಈ ಲೋಕವು ಹೋಯ್ತು
ಎಲ್ಲೋ ಮಣ್ಣಲ್ಲಡಗಿದ….
ಈ ಜಗದ ರೀತಿ ನೀತಿಯಿದು

ಹಸಿ ಗಾಯದಿ ಬಸಿವ
ನೆತ್ತರ ತೆರಹದಿ
ಬರಿಯ ವ್ಯಥೆಯೇ ಜೀವ ತುಂಬಿರಲು

ಸುಡು ಬಿಸಿಲಿನ ನಡು ಹಗಲು
ಮುಸ್ಸಂಜೆ ಕವಿದಿತ್ತು…
ಮನಕ್ಕೆಲ್ಲ ತಂಪು ಎರೆದಿತ್ತು
ಅಂದು ಇಂದಿನ ನಡುವೆ ತಿರುಗಿತ್ತು
ಹದಿನಾಲ್ಕು ವರ್ಷಗಳ
ಕಠೋರ ನಿಷ್ಕರುಣ ಕಾಲಚಕ್ರ

*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...