Home / ಕವನ / ಕವಿತೆ / ಹದಿನಾಲ್ಕು ವರ್ಷಗಳ ನಂತರ

ಹದಿನಾಲ್ಕು ವರ್ಷಗಳ ನಂತರ

ಹದಿನಾಲ್ಕು ವರುಷಗಳ ಮೇಲೆ
ಸವಿನೆನಪುಗಳ ಬುತ್ತಿಯಲಿ
ಏನೇನೊ ಹಲವು ಕನಸನೆ ಹೊತ್ತು
ಮಣ್ಣ ವಾಸನೆ ಅರಸುತ ಹಳ್ಳಿಗೆ ನಡೆದೆ

ಕರಿಮಣ್ಣಿನ ಏರೆಹೊಲದ ದಿಬ್ಬದಿ
ನನ್ನೂರು ಕಾಣುವ ತವಕದಿ
ಹೆಜ್ಜೆಯ ಮೇಲೆ ಹೆಜ್ಜೆಯಿಡುತ ಇಳಿದಾಗ
ಜುಳು… ಜುಳು… ಹರಿಯುತಿಹಳು
ಕಷ್ಣೆಯುದರದೊಳಗಿನ `ಡೋಣಿ’

ಹದಿನಾಲ್ಕು ವರ್ಷಗಳ ಹಿಂದೆ
ಹೇಗಿತ್ತು ಹಾಗೆ ಇಂದಿಗು ಎಲ್ಲೆಲ್ಲೂ
ಪರಿಚಯದ ಮರುಛಾಯೆ
ಕಣ್ಮುಂದೆ ತುಂಬಿ ಮರುಕಳಿಸಿತ್ತು
ಮನದಿ ಇಲ್ಲುಂಡ ಸುಖವೆಲ್ಲ
ಬಾಲ್ಯದ ಬನವ ತವಕದಲಿ
ಹೊಕ್ಕಾಗ ಎಲ್ಲೆಡೆಗೂ ಹದಿನಾಲ್ಕು ವರ್ಷಗಳ
ಮುದುಡಿದ ಮುದಿ ನೆರಳು ಕವಿದಿತ್ತು

ವರುಣ ದುಬಾರಿಯಾಗಿದ್ದು…
ಎಲ್ಲೆಡೆ ಬಣ… ಬಣ
ನೆಲ ಜಲ – ಮನಗಳು
ನಿಂತ ಮರವಾಗಿದ್ದವು ಒಣಗಿ…

ಹೊಟ್ಟೆಪಾಡಿಗಾಗಿ ಗುಳೆ ಎದ್ದು ಹೋಗಿದ್ದ
ನನ್ನೂರಿನ ಅಣ್ಣ-ತಮ್ಮಂದಿರು
ಅಕ್ಕ-ತಂಗಿಯರು ಕಾಣದ
ಓಣೆಲ್ಲಾ ಮೌನ ಆವರಿಸಿತ್ತು

ಓಡಾಡಿ… ಆಡಿದ
ಬೆಚ್ಚಗಿನ ಮನೆಗಳೆಲ್ಲಾ ನೆಲಕೆ
ಕುಸಿದ ಮಣ್ಣಿನ ಗುಡ್ಡೆಗಳೆಲ್ಲ
ಹುಗಿದಿಟ್ಟುಕೊಂಡ ಬಾಲ್ಯದ ನೆನಪುಗಳೆಲ್ಲಾ
ಬಿದ್ದಿದ್ದವು ಮಾಸಿ ತಬ್ಬಲಿಯಾಗಿ

ಅಂದು ಗಿಜಿ-ಗಿಜಿ ತುಂಬಿದ
ಭೇದವೆಣಿಸದ ಮನಗಳು ಓಣಿಗಳು
ನಿರ್ಜೀವ ಸವೆತದ ಮುದುಡಿದ
ಆ ಹಿರಿಜೀವಗಳ ಅಸಹಾಯಕತೆ ಕಾಣುತ

ಕಣ್ಮುಂದೆ ಕಟ್ಟುತಲಿ
ಜೀವ ಮರಮರನೆ ಬಳಲಿತು
ಅವ್ವ-ಅಪ್ಪ- ಹೋದ
ಅಜ್ಜ-ಮುತ್ತಜ್ಜರು ಹೋದ
ಮನೆ-ಮನ-ಬರಿದಾಗಿತ್ತು

ಆ ಹಿರಿಜೀವಗಳ ಸ್ಪರ್ಶದ
ಪ್ರೀತಿ ಉಂಡ ಬಾಲ್ಯವು
ಅವರೊಡನೆ ಈ ಲೋಕವು ಹೋಯ್ತು
ಎಲ್ಲೋ ಮಣ್ಣಲ್ಲಡಗಿದ….
ಈ ಜಗದ ರೀತಿ ನೀತಿಯಿದು

ಹಸಿ ಗಾಯದಿ ಬಸಿವ
ನೆತ್ತರ ತೆರಹದಿ
ಬರಿಯ ವ್ಯಥೆಯೇ ಜೀವ ತುಂಬಿರಲು

ಸುಡು ಬಿಸಿಲಿನ ನಡು ಹಗಲು
ಮುಸ್ಸಂಜೆ ಕವಿದಿತ್ತು…
ಮನಕ್ಕೆಲ್ಲ ತಂಪು ಎರೆದಿತ್ತು
ಅಂದು ಇಂದಿನ ನಡುವೆ ತಿರುಗಿತ್ತು
ಹದಿನಾಲ್ಕು ವರ್ಷಗಳ
ಕಠೋರ ನಿಷ್ಕರುಣ ಕಾಲಚಕ್ರ

*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...