Home / ಕವನ / ಕವಿತೆ / ಹದಿನಾಲ್ಕು ವರ್ಷಗಳ ನಂತರ

ಹದಿನಾಲ್ಕು ವರ್ಷಗಳ ನಂತರ

ಹದಿನಾಲ್ಕು ವರುಷಗಳ ಮೇಲೆ
ಸವಿನೆನಪುಗಳ ಬುತ್ತಿಯಲಿ
ಏನೇನೊ ಹಲವು ಕನಸನೆ ಹೊತ್ತು
ಮಣ್ಣ ವಾಸನೆ ಅರಸುತ ಹಳ್ಳಿಗೆ ನಡೆದೆ

ಕರಿಮಣ್ಣಿನ ಏರೆಹೊಲದ ದಿಬ್ಬದಿ
ನನ್ನೂರು ಕಾಣುವ ತವಕದಿ
ಹೆಜ್ಜೆಯ ಮೇಲೆ ಹೆಜ್ಜೆಯಿಡುತ ಇಳಿದಾಗ
ಜುಳು… ಜುಳು… ಹರಿಯುತಿಹಳು
ಕಷ್ಣೆಯುದರದೊಳಗಿನ `ಡೋಣಿ’

ಹದಿನಾಲ್ಕು ವರ್ಷಗಳ ಹಿಂದೆ
ಹೇಗಿತ್ತು ಹಾಗೆ ಇಂದಿಗು ಎಲ್ಲೆಲ್ಲೂ
ಪರಿಚಯದ ಮರುಛಾಯೆ
ಕಣ್ಮುಂದೆ ತುಂಬಿ ಮರುಕಳಿಸಿತ್ತು
ಮನದಿ ಇಲ್ಲುಂಡ ಸುಖವೆಲ್ಲ
ಬಾಲ್ಯದ ಬನವ ತವಕದಲಿ
ಹೊಕ್ಕಾಗ ಎಲ್ಲೆಡೆಗೂ ಹದಿನಾಲ್ಕು ವರ್ಷಗಳ
ಮುದುಡಿದ ಮುದಿ ನೆರಳು ಕವಿದಿತ್ತು

ವರುಣ ದುಬಾರಿಯಾಗಿದ್ದು…
ಎಲ್ಲೆಡೆ ಬಣ… ಬಣ
ನೆಲ ಜಲ – ಮನಗಳು
ನಿಂತ ಮರವಾಗಿದ್ದವು ಒಣಗಿ…

ಹೊಟ್ಟೆಪಾಡಿಗಾಗಿ ಗುಳೆ ಎದ್ದು ಹೋಗಿದ್ದ
ನನ್ನೂರಿನ ಅಣ್ಣ-ತಮ್ಮಂದಿರು
ಅಕ್ಕ-ತಂಗಿಯರು ಕಾಣದ
ಓಣೆಲ್ಲಾ ಮೌನ ಆವರಿಸಿತ್ತು

ಓಡಾಡಿ… ಆಡಿದ
ಬೆಚ್ಚಗಿನ ಮನೆಗಳೆಲ್ಲಾ ನೆಲಕೆ
ಕುಸಿದ ಮಣ್ಣಿನ ಗುಡ್ಡೆಗಳೆಲ್ಲ
ಹುಗಿದಿಟ್ಟುಕೊಂಡ ಬಾಲ್ಯದ ನೆನಪುಗಳೆಲ್ಲಾ
ಬಿದ್ದಿದ್ದವು ಮಾಸಿ ತಬ್ಬಲಿಯಾಗಿ

ಅಂದು ಗಿಜಿ-ಗಿಜಿ ತುಂಬಿದ
ಭೇದವೆಣಿಸದ ಮನಗಳು ಓಣಿಗಳು
ನಿರ್ಜೀವ ಸವೆತದ ಮುದುಡಿದ
ಆ ಹಿರಿಜೀವಗಳ ಅಸಹಾಯಕತೆ ಕಾಣುತ

ಕಣ್ಮುಂದೆ ಕಟ್ಟುತಲಿ
ಜೀವ ಮರಮರನೆ ಬಳಲಿತು
ಅವ್ವ-ಅಪ್ಪ- ಹೋದ
ಅಜ್ಜ-ಮುತ್ತಜ್ಜರು ಹೋದ
ಮನೆ-ಮನ-ಬರಿದಾಗಿತ್ತು

ಆ ಹಿರಿಜೀವಗಳ ಸ್ಪರ್ಶದ
ಪ್ರೀತಿ ಉಂಡ ಬಾಲ್ಯವು
ಅವರೊಡನೆ ಈ ಲೋಕವು ಹೋಯ್ತು
ಎಲ್ಲೋ ಮಣ್ಣಲ್ಲಡಗಿದ….
ಈ ಜಗದ ರೀತಿ ನೀತಿಯಿದು

ಹಸಿ ಗಾಯದಿ ಬಸಿವ
ನೆತ್ತರ ತೆರಹದಿ
ಬರಿಯ ವ್ಯಥೆಯೇ ಜೀವ ತುಂಬಿರಲು

ಸುಡು ಬಿಸಿಲಿನ ನಡು ಹಗಲು
ಮುಸ್ಸಂಜೆ ಕವಿದಿತ್ತು…
ಮನಕ್ಕೆಲ್ಲ ತಂಪು ಎರೆದಿತ್ತು
ಅಂದು ಇಂದಿನ ನಡುವೆ ತಿರುಗಿತ್ತು
ಹದಿನಾಲ್ಕು ವರ್ಷಗಳ
ಕಠೋರ ನಿಷ್ಕರುಣ ಕಾಲಚಕ್ರ

*****

 

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...