ಹದಿನಾಲ್ಕು ವರ್ಷಗಳ ನಂತರ

ಹದಿನಾಲ್ಕು ವರುಷಗಳ ಮೇಲೆ
ಸವಿನೆನಪುಗಳ ಬುತ್ತಿಯಲಿ
ಏನೇನೊ ಹಲವು ಕನಸನೆ ಹೊತ್ತು
ಮಣ್ಣ ವಾಸನೆ ಅರಸುತ ಹಳ್ಳಿಗೆ ನಡೆದೆ

ಕರಿಮಣ್ಣಿನ ಏರೆಹೊಲದ ದಿಬ್ಬದಿ
ನನ್ನೂರು ಕಾಣುವ ತವಕದಿ
ಹೆಜ್ಜೆಯ ಮೇಲೆ ಹೆಜ್ಜೆಯಿಡುತ ಇಳಿದಾಗ
ಜುಳು… ಜುಳು… ಹರಿಯುತಿಹಳು
ಕಷ್ಣೆಯುದರದೊಳಗಿನ `ಡೋಣಿ’

ಹದಿನಾಲ್ಕು ವರ್ಷಗಳ ಹಿಂದೆ
ಹೇಗಿತ್ತು ಹಾಗೆ ಇಂದಿಗು ಎಲ್ಲೆಲ್ಲೂ
ಪರಿಚಯದ ಮರುಛಾಯೆ
ಕಣ್ಮುಂದೆ ತುಂಬಿ ಮರುಕಳಿಸಿತ್ತು
ಮನದಿ ಇಲ್ಲುಂಡ ಸುಖವೆಲ್ಲ
ಬಾಲ್ಯದ ಬನವ ತವಕದಲಿ
ಹೊಕ್ಕಾಗ ಎಲ್ಲೆಡೆಗೂ ಹದಿನಾಲ್ಕು ವರ್ಷಗಳ
ಮುದುಡಿದ ಮುದಿ ನೆರಳು ಕವಿದಿತ್ತು

ವರುಣ ದುಬಾರಿಯಾಗಿದ್ದು…
ಎಲ್ಲೆಡೆ ಬಣ… ಬಣ
ನೆಲ ಜಲ – ಮನಗಳು
ನಿಂತ ಮರವಾಗಿದ್ದವು ಒಣಗಿ…

ಹೊಟ್ಟೆಪಾಡಿಗಾಗಿ ಗುಳೆ ಎದ್ದು ಹೋಗಿದ್ದ
ನನ್ನೂರಿನ ಅಣ್ಣ-ತಮ್ಮಂದಿರು
ಅಕ್ಕ-ತಂಗಿಯರು ಕಾಣದ
ಓಣೆಲ್ಲಾ ಮೌನ ಆವರಿಸಿತ್ತು

ಓಡಾಡಿ… ಆಡಿದ
ಬೆಚ್ಚಗಿನ ಮನೆಗಳೆಲ್ಲಾ ನೆಲಕೆ
ಕುಸಿದ ಮಣ್ಣಿನ ಗುಡ್ಡೆಗಳೆಲ್ಲ
ಹುಗಿದಿಟ್ಟುಕೊಂಡ ಬಾಲ್ಯದ ನೆನಪುಗಳೆಲ್ಲಾ
ಬಿದ್ದಿದ್ದವು ಮಾಸಿ ತಬ್ಬಲಿಯಾಗಿ

ಅಂದು ಗಿಜಿ-ಗಿಜಿ ತುಂಬಿದ
ಭೇದವೆಣಿಸದ ಮನಗಳು ಓಣಿಗಳು
ನಿರ್ಜೀವ ಸವೆತದ ಮುದುಡಿದ
ಆ ಹಿರಿಜೀವಗಳ ಅಸಹಾಯಕತೆ ಕಾಣುತ

ಕಣ್ಮುಂದೆ ಕಟ್ಟುತಲಿ
ಜೀವ ಮರಮರನೆ ಬಳಲಿತು
ಅವ್ವ-ಅಪ್ಪ- ಹೋದ
ಅಜ್ಜ-ಮುತ್ತಜ್ಜರು ಹೋದ
ಮನೆ-ಮನ-ಬರಿದಾಗಿತ್ತು

ಆ ಹಿರಿಜೀವಗಳ ಸ್ಪರ್ಶದ
ಪ್ರೀತಿ ಉಂಡ ಬಾಲ್ಯವು
ಅವರೊಡನೆ ಈ ಲೋಕವು ಹೋಯ್ತು
ಎಲ್ಲೋ ಮಣ್ಣಲ್ಲಡಗಿದ….
ಈ ಜಗದ ರೀತಿ ನೀತಿಯಿದು

ಹಸಿ ಗಾಯದಿ ಬಸಿವ
ನೆತ್ತರ ತೆರಹದಿ
ಬರಿಯ ವ್ಯಥೆಯೇ ಜೀವ ತುಂಬಿರಲು

ಸುಡು ಬಿಸಿಲಿನ ನಡು ಹಗಲು
ಮುಸ್ಸಂಜೆ ಕವಿದಿತ್ತು…
ಮನಕ್ಕೆಲ್ಲ ತಂಪು ಎರೆದಿತ್ತು
ಅಂದು ಇಂದಿನ ನಡುವೆ ತಿರುಗಿತ್ತು
ಹದಿನಾಲ್ಕು ವರ್ಷಗಳ
ಕಠೋರ ನಿಷ್ಕರುಣ ಕಾಲಚಕ್ರ

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾ ಬಾ ಸಿರಿಯೆ
Next post ಸೇದಿದಿಯಾ ಬತ್ತಿ ನೀ ಸೇದಿದಿಯಾ

ಸಣ್ಣ ಕತೆ

  • ಪ್ಲೇಗುಮಾರಿಯ ಹೊಡೆತ

    ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ;… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…