ನನಗೆ ಟೀ ಬೇಕು
ಟಿಫಿನ್ ಬೇಕು
ಹೊದೆಯುವುದಕ್ಕೆ ಚದ್ದರ ಬೇಕು
ಎಂದೆ
ಸೋಶಿಯೋಳಜಿ ಸೈಕಾಳಜಿ ಆಂತ್ರೊಪೋಳಜಿ
ಫಿಲಾಸಫಿ ಸಾಕು ನಿನಗೆ ಎಂದಿರಿ
ಎಲ್ಲಾ ಅನುಭವಿಸಬೇಕು ನನಗೆ
ಎಂದು ಕೂಗಿದೆ
ಇಂದ್ರಿಯಗಳಿಂದ ಇತ್ತ ಬಾ
ಅಳಬೇಡ ನಗಬೇಡ ಚಿಂತಿಸು
ಎಂದಿರಿ
ಚಿಂತಿಸಿದೆ ಸಣ್ಣ ತಲೆಬುರುಡೆಯೊಳಗೆ
ಬೆಳೆಸಿದೆ ಮಿದುಳು ಬ್ರಹ್ಮಾಂಡವಾಗಿ
ಪ್ರೀತಿಸಲಿಲ್ಲ, ದ್ವೇಷಿಸಲಿಲ್ಲ
ನಿರ್ಲಿಪ್ತನಾದೆ
ಅನಾಸ್ತೇಸಿಯಾ ಆದೆ !
ಈಗಲೋ ನನಗೆ ಹಸಿವಿಲ್ಲ ರುಚಿಯಿಲ್ಲ
ಉಪ್ಪು ಖಾರ ಗೊತ್ತಿಲ್ಲ
ದೊಡ್ಡ ಬುದ್ಧಿಯ ಕೆಳಗೆ
ಸಣ್ಣ ಕೈ ಕಾಲುಗಳ
ವ್ಯಂಗ್ಯಚಿತ್ರ ಈ ನಾನು
ಇರಲಿ ಬಿಡಿ
ಆತ್ಮಹತ್ಯೆಯ ಕುರಿತು
ಏನೆನ್ನುತ್ತವೆ ಸಾರ್ ನಿಮ್ಮ ಗ್ರಂಥಗಳು ?
*****
Related Post
ಸಣ್ಣ ಕತೆ
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…