Home / ಲೇಖನ / ಇತರೆ / ಕಿಡ್ನಿ ಕತೆ

ಕಿಡ್ನಿ ಕತೆ

ದೇವರು ದೊಡ್ಡವನು. ಮನುಷ್ಯನಿಗೆ ಅನುಕೂಲವಾಗಲೆಂದೇ ಎರಡು ಕಿಡ್ನಿಗಳನ್ನು ನೀಡಿದ್ದಾನೆ!

ಚೀನಾದ ಬೀಜಿಂಗ್‌ನ ಜಿನ್‌ಹುವಾ ನಗರದ ದೊನ್‌ಗ್ಯಾಂಗ್ ಪೀಪಲ್ಸ್ ಆಸ್ಪತ್ರೆಯಲ್ಲಿ ದಿನಾಂಕ ೨೮.೦೭.೨೦೧೫ರಂದು ಮಂಗಳವಾರ ದಿನದಂದು ಸತತವಾಗಿ ಎರಡು ತಾಸುಗಳವರೆಗೆ ನಡೆದ ತುರ್ತು ಶಸ್ತ್ರಚಿಕಿತ್ಸೆಯಲ್ಲಿ ಹೇ ಡಾಂಗ್ ಎಂಬ ವ್ಯಕ್ತಿಯ ಎಡಬದಿಯ ಕಿಡ್ನಿಯಿಂದ ಸುಮಾರು ೪೨೦ ಕಲ್ಲುಗಳನ್ನು ವೈದ್ಯರು ಹೊರತೆಗೆದು ವ್ಯಕ್ತಿಯನ್ನು ಬದುಕಿಸಿದ್ದಾರೆ.

ಈ ವ್ಯಕ್ತಿ ಹೆಚ್ಚು ಜಿಪ್ಸಂ ಟೊಪು ಖಾದ್ಯ (ಬರೀ ಖನಿಜಯುಕ್ತ ಆಹಾರವನ್ನು) ಸೇವಿಸುತ್ತಿದ್ದ ಹಾಗೂ ನೀರು ಕುಡಿಯುವ ಹವ್ಯಾಸವೇ ಇರಲಿಲ್ಲ..!

“ಈ ಸೋಯಾ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲ್ಸಿಯಂ ಇರುತ್ತದೆ. ಜಿಪ್ಸಂ ಟೊಪು ಸಹ ಅದರಿಂದಲೇ ತಯಾರಾಗುತ್ತಿದ್ದು ಹೆಚ್ಚಿನ ನೀರು ಕುಡಿದು ಬೆವರು ಭಸಿಯುವ ಕೆಲಸ ಮಾಡುವುದರಿಂದ ಮಾತ್ರ ಈ ಥರದ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯ…” ಎಂದು ವೈದ್ಯರಾದ ವೈಯುಬಿನ್ ಅವರು ವಿವರಿಸಿದ್ದಾರೆ.

ಹೇ ಡಾಂಗ್‌ಂಗೆ ತೀವ್ರ ಹೊಟ್ಟೆ ನೋವು ಕಾಣಿಸಿದ್ದರಿಂದ ಸಿಟಿ ಸ್ಕ್ಯಾನ್ ಮಾಡಲಾಯಿತು. ಕಿಡ್ನಿಯಲ್ಲಿ ಅಪಾರ ಪ್ರಮಾಣದಲ್ಲಿ ಕಲ್ಲುಗಳು ತುಂಬಿ ತುಂಬಿ ಹೋಗಿದ್ದವು! ಆಗ ಸತತವಾಗಿ ಎರಡು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ೪೫ ನಿಮಿಷಗಳಲ್ಲಿ ಕಲ್ಲುಗಳನ್ನು ಹೊರತೆಗೆಯಲಾಯಿತು. ಅಷ್ಟೊಂದು ಕಲ್ಲುಗಳನ್ನು ತೆಗೆದು ನನ್ನ ಕೈ ಹಾಗೂ ಬೆರಳುಗಳು ಮರಗಟ್ಟಿದ್ದವು…. ಎಂದು ವೈದ್ಯರು ಅಲ್ಲಿ ಸೇರಿದ್ದ ಜನರಿಗೆ ವಿವರಿಸಿದರು.

ಆದ್ದರಿಂದ ಪ್ರತಿಯೊಬ್ಬರು ಪ್ರತಿನಿತ್ಯ ೨-೩ ಲೀಟರ್ ನೀರನ್ನು ಕಡಿಮೆ ಎಂದರೂ ಕುಡಿಯಲೇಬೇಕು. ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಕಿಡ್ನಿಗಳು ಸರಿಯಾಗಿ ಕೆಲಸ ಮಾಡಲು ನೀರು ಬೇಕೇಬೇಕು.

ಆದ್ದರಿಂದ ಹೆಚ್ಚು ಹೆಚ್ಚು ದ್ರವರೂಪದ ಆಹಾರ ಸೇವಿಸಲೇ ಬೇಕು. ಏನಂತಿರಾ?! ಹೌದು ಅಂತೀರಿ. ಅನ್ನಲೇಬೇಕು.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...