Home / ಲೇಖನ / ಇತರೆ / ಕಿಡ್ನಿ ಕತೆ

ಕಿಡ್ನಿ ಕತೆ

ದೇವರು ದೊಡ್ಡವನು. ಮನುಷ್ಯನಿಗೆ ಅನುಕೂಲವಾಗಲೆಂದೇ ಎರಡು ಕಿಡ್ನಿಗಳನ್ನು ನೀಡಿದ್ದಾನೆ!

ಚೀನಾದ ಬೀಜಿಂಗ್‌ನ ಜಿನ್‌ಹುವಾ ನಗರದ ದೊನ್‌ಗ್ಯಾಂಗ್ ಪೀಪಲ್ಸ್ ಆಸ್ಪತ್ರೆಯಲ್ಲಿ ದಿನಾಂಕ ೨೮.೦೭.೨೦೧೫ರಂದು ಮಂಗಳವಾರ ದಿನದಂದು ಸತತವಾಗಿ ಎರಡು ತಾಸುಗಳವರೆಗೆ ನಡೆದ ತುರ್ತು ಶಸ್ತ್ರಚಿಕಿತ್ಸೆಯಲ್ಲಿ ಹೇ ಡಾಂಗ್ ಎಂಬ ವ್ಯಕ್ತಿಯ ಎಡಬದಿಯ ಕಿಡ್ನಿಯಿಂದ ಸುಮಾರು ೪೨೦ ಕಲ್ಲುಗಳನ್ನು ವೈದ್ಯರು ಹೊರತೆಗೆದು ವ್ಯಕ್ತಿಯನ್ನು ಬದುಕಿಸಿದ್ದಾರೆ.

ಈ ವ್ಯಕ್ತಿ ಹೆಚ್ಚು ಜಿಪ್ಸಂ ಟೊಪು ಖಾದ್ಯ (ಬರೀ ಖನಿಜಯುಕ್ತ ಆಹಾರವನ್ನು) ಸೇವಿಸುತ್ತಿದ್ದ ಹಾಗೂ ನೀರು ಕುಡಿಯುವ ಹವ್ಯಾಸವೇ ಇರಲಿಲ್ಲ..!

“ಈ ಸೋಯಾ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲ್ಸಿಯಂ ಇರುತ್ತದೆ. ಜಿಪ್ಸಂ ಟೊಪು ಸಹ ಅದರಿಂದಲೇ ತಯಾರಾಗುತ್ತಿದ್ದು ಹೆಚ್ಚಿನ ನೀರು ಕುಡಿದು ಬೆವರು ಭಸಿಯುವ ಕೆಲಸ ಮಾಡುವುದರಿಂದ ಮಾತ್ರ ಈ ಥರದ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯ…” ಎಂದು ವೈದ್ಯರಾದ ವೈಯುಬಿನ್ ಅವರು ವಿವರಿಸಿದ್ದಾರೆ.

ಹೇ ಡಾಂಗ್‌ಂಗೆ ತೀವ್ರ ಹೊಟ್ಟೆ ನೋವು ಕಾಣಿಸಿದ್ದರಿಂದ ಸಿಟಿ ಸ್ಕ್ಯಾನ್ ಮಾಡಲಾಯಿತು. ಕಿಡ್ನಿಯಲ್ಲಿ ಅಪಾರ ಪ್ರಮಾಣದಲ್ಲಿ ಕಲ್ಲುಗಳು ತುಂಬಿ ತುಂಬಿ ಹೋಗಿದ್ದವು! ಆಗ ಸತತವಾಗಿ ಎರಡು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ೪೫ ನಿಮಿಷಗಳಲ್ಲಿ ಕಲ್ಲುಗಳನ್ನು ಹೊರತೆಗೆಯಲಾಯಿತು. ಅಷ್ಟೊಂದು ಕಲ್ಲುಗಳನ್ನು ತೆಗೆದು ನನ್ನ ಕೈ ಹಾಗೂ ಬೆರಳುಗಳು ಮರಗಟ್ಟಿದ್ದವು…. ಎಂದು ವೈದ್ಯರು ಅಲ್ಲಿ ಸೇರಿದ್ದ ಜನರಿಗೆ ವಿವರಿಸಿದರು.

ಆದ್ದರಿಂದ ಪ್ರತಿಯೊಬ್ಬರು ಪ್ರತಿನಿತ್ಯ ೨-೩ ಲೀಟರ್ ನೀರನ್ನು ಕಡಿಮೆ ಎಂದರೂ ಕುಡಿಯಲೇಬೇಕು. ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಕಿಡ್ನಿಗಳು ಸರಿಯಾಗಿ ಕೆಲಸ ಮಾಡಲು ನೀರು ಬೇಕೇಬೇಕು.

ಆದ್ದರಿಂದ ಹೆಚ್ಚು ಹೆಚ್ಚು ದ್ರವರೂಪದ ಆಹಾರ ಸೇವಿಸಲೇ ಬೇಕು. ಏನಂತಿರಾ?! ಹೌದು ಅಂತೀರಿ. ಅನ್ನಲೇಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...