Home / ಲೇಖನ / ಇತರೆ / ಕಿಡ್ನಿ ಕತೆ

ಕಿಡ್ನಿ ಕತೆ

ದೇವರು ದೊಡ್ಡವನು. ಮನುಷ್ಯನಿಗೆ ಅನುಕೂಲವಾಗಲೆಂದೇ ಎರಡು ಕಿಡ್ನಿಗಳನ್ನು ನೀಡಿದ್ದಾನೆ!

ಚೀನಾದ ಬೀಜಿಂಗ್‌ನ ಜಿನ್‌ಹುವಾ ನಗರದ ದೊನ್‌ಗ್ಯಾಂಗ್ ಪೀಪಲ್ಸ್ ಆಸ್ಪತ್ರೆಯಲ್ಲಿ ದಿನಾಂಕ ೨೮.೦೭.೨೦೧೫ರಂದು ಮಂಗಳವಾರ ದಿನದಂದು ಸತತವಾಗಿ ಎರಡು ತಾಸುಗಳವರೆಗೆ ನಡೆದ ತುರ್ತು ಶಸ್ತ್ರಚಿಕಿತ್ಸೆಯಲ್ಲಿ ಹೇ ಡಾಂಗ್ ಎಂಬ ವ್ಯಕ್ತಿಯ ಎಡಬದಿಯ ಕಿಡ್ನಿಯಿಂದ ಸುಮಾರು ೪೨೦ ಕಲ್ಲುಗಳನ್ನು ವೈದ್ಯರು ಹೊರತೆಗೆದು ವ್ಯಕ್ತಿಯನ್ನು ಬದುಕಿಸಿದ್ದಾರೆ.

ಈ ವ್ಯಕ್ತಿ ಹೆಚ್ಚು ಜಿಪ್ಸಂ ಟೊಪು ಖಾದ್ಯ (ಬರೀ ಖನಿಜಯುಕ್ತ ಆಹಾರವನ್ನು) ಸೇವಿಸುತ್ತಿದ್ದ ಹಾಗೂ ನೀರು ಕುಡಿಯುವ ಹವ್ಯಾಸವೇ ಇರಲಿಲ್ಲ..!

“ಈ ಸೋಯಾ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲ್ಸಿಯಂ ಇರುತ್ತದೆ. ಜಿಪ್ಸಂ ಟೊಪು ಸಹ ಅದರಿಂದಲೇ ತಯಾರಾಗುತ್ತಿದ್ದು ಹೆಚ್ಚಿನ ನೀರು ಕುಡಿದು ಬೆವರು ಭಸಿಯುವ ಕೆಲಸ ಮಾಡುವುದರಿಂದ ಮಾತ್ರ ಈ ಥರದ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯ…” ಎಂದು ವೈದ್ಯರಾದ ವೈಯುಬಿನ್ ಅವರು ವಿವರಿಸಿದ್ದಾರೆ.

ಹೇ ಡಾಂಗ್‌ಂಗೆ ತೀವ್ರ ಹೊಟ್ಟೆ ನೋವು ಕಾಣಿಸಿದ್ದರಿಂದ ಸಿಟಿ ಸ್ಕ್ಯಾನ್ ಮಾಡಲಾಯಿತು. ಕಿಡ್ನಿಯಲ್ಲಿ ಅಪಾರ ಪ್ರಮಾಣದಲ್ಲಿ ಕಲ್ಲುಗಳು ತುಂಬಿ ತುಂಬಿ ಹೋಗಿದ್ದವು! ಆಗ ಸತತವಾಗಿ ಎರಡು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ೪೫ ನಿಮಿಷಗಳಲ್ಲಿ ಕಲ್ಲುಗಳನ್ನು ಹೊರತೆಗೆಯಲಾಯಿತು. ಅಷ್ಟೊಂದು ಕಲ್ಲುಗಳನ್ನು ತೆಗೆದು ನನ್ನ ಕೈ ಹಾಗೂ ಬೆರಳುಗಳು ಮರಗಟ್ಟಿದ್ದವು…. ಎಂದು ವೈದ್ಯರು ಅಲ್ಲಿ ಸೇರಿದ್ದ ಜನರಿಗೆ ವಿವರಿಸಿದರು.

ಆದ್ದರಿಂದ ಪ್ರತಿಯೊಬ್ಬರು ಪ್ರತಿನಿತ್ಯ ೨-೩ ಲೀಟರ್ ನೀರನ್ನು ಕಡಿಮೆ ಎಂದರೂ ಕುಡಿಯಲೇಬೇಕು. ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಕಿಡ್ನಿಗಳು ಸರಿಯಾಗಿ ಕೆಲಸ ಮಾಡಲು ನೀರು ಬೇಕೇಬೇಕು.

ಆದ್ದರಿಂದ ಹೆಚ್ಚು ಹೆಚ್ಚು ದ್ರವರೂಪದ ಆಹಾರ ಸೇವಿಸಲೇ ಬೇಕು. ಏನಂತಿರಾ?! ಹೌದು ಅಂತೀರಿ. ಅನ್ನಲೇಬೇಕು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...