Home / ಲೇಖನ / ಇತರೆ / ಕಿಡ್ನಿ ಕತೆ

ಕಿಡ್ನಿ ಕತೆ

ದೇವರು ದೊಡ್ಡವನು. ಮನುಷ್ಯನಿಗೆ ಅನುಕೂಲವಾಗಲೆಂದೇ ಎರಡು ಕಿಡ್ನಿಗಳನ್ನು ನೀಡಿದ್ದಾನೆ!

ಚೀನಾದ ಬೀಜಿಂಗ್‌ನ ಜಿನ್‌ಹುವಾ ನಗರದ ದೊನ್‌ಗ್ಯಾಂಗ್ ಪೀಪಲ್ಸ್ ಆಸ್ಪತ್ರೆಯಲ್ಲಿ ದಿನಾಂಕ ೨೮.೦೭.೨೦೧೫ರಂದು ಮಂಗಳವಾರ ದಿನದಂದು ಸತತವಾಗಿ ಎರಡು ತಾಸುಗಳವರೆಗೆ ನಡೆದ ತುರ್ತು ಶಸ್ತ್ರಚಿಕಿತ್ಸೆಯಲ್ಲಿ ಹೇ ಡಾಂಗ್ ಎಂಬ ವ್ಯಕ್ತಿಯ ಎಡಬದಿಯ ಕಿಡ್ನಿಯಿಂದ ಸುಮಾರು ೪೨೦ ಕಲ್ಲುಗಳನ್ನು ವೈದ್ಯರು ಹೊರತೆಗೆದು ವ್ಯಕ್ತಿಯನ್ನು ಬದುಕಿಸಿದ್ದಾರೆ.

ಈ ವ್ಯಕ್ತಿ ಹೆಚ್ಚು ಜಿಪ್ಸಂ ಟೊಪು ಖಾದ್ಯ (ಬರೀ ಖನಿಜಯುಕ್ತ ಆಹಾರವನ್ನು) ಸೇವಿಸುತ್ತಿದ್ದ ಹಾಗೂ ನೀರು ಕುಡಿಯುವ ಹವ್ಯಾಸವೇ ಇರಲಿಲ್ಲ..!

“ಈ ಸೋಯಾ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲ್ಸಿಯಂ ಇರುತ್ತದೆ. ಜಿಪ್ಸಂ ಟೊಪು ಸಹ ಅದರಿಂದಲೇ ತಯಾರಾಗುತ್ತಿದ್ದು ಹೆಚ್ಚಿನ ನೀರು ಕುಡಿದು ಬೆವರು ಭಸಿಯುವ ಕೆಲಸ ಮಾಡುವುದರಿಂದ ಮಾತ್ರ ಈ ಥರದ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯ…” ಎಂದು ವೈದ್ಯರಾದ ವೈಯುಬಿನ್ ಅವರು ವಿವರಿಸಿದ್ದಾರೆ.

ಹೇ ಡಾಂಗ್‌ಂಗೆ ತೀವ್ರ ಹೊಟ್ಟೆ ನೋವು ಕಾಣಿಸಿದ್ದರಿಂದ ಸಿಟಿ ಸ್ಕ್ಯಾನ್ ಮಾಡಲಾಯಿತು. ಕಿಡ್ನಿಯಲ್ಲಿ ಅಪಾರ ಪ್ರಮಾಣದಲ್ಲಿ ಕಲ್ಲುಗಳು ತುಂಬಿ ತುಂಬಿ ಹೋಗಿದ್ದವು! ಆಗ ಸತತವಾಗಿ ಎರಡು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ೪೫ ನಿಮಿಷಗಳಲ್ಲಿ ಕಲ್ಲುಗಳನ್ನು ಹೊರತೆಗೆಯಲಾಯಿತು. ಅಷ್ಟೊಂದು ಕಲ್ಲುಗಳನ್ನು ತೆಗೆದು ನನ್ನ ಕೈ ಹಾಗೂ ಬೆರಳುಗಳು ಮರಗಟ್ಟಿದ್ದವು…. ಎಂದು ವೈದ್ಯರು ಅಲ್ಲಿ ಸೇರಿದ್ದ ಜನರಿಗೆ ವಿವರಿಸಿದರು.

ಆದ್ದರಿಂದ ಪ್ರತಿಯೊಬ್ಬರು ಪ್ರತಿನಿತ್ಯ ೨-೩ ಲೀಟರ್ ನೀರನ್ನು ಕಡಿಮೆ ಎಂದರೂ ಕುಡಿಯಲೇಬೇಕು. ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಕಿಡ್ನಿಗಳು ಸರಿಯಾಗಿ ಕೆಲಸ ಮಾಡಲು ನೀರು ಬೇಕೇಬೇಕು.

ಆದ್ದರಿಂದ ಹೆಚ್ಚು ಹೆಚ್ಚು ದ್ರವರೂಪದ ಆಹಾರ ಸೇವಿಸಲೇ ಬೇಕು. ಏನಂತಿರಾ?! ಹೌದು ಅಂತೀರಿ. ಅನ್ನಲೇಬೇಕು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ