Home / ಲೇಖನ / ಇತರೆ / ಕಿಡ್ನಿ ಕತೆ

ಕಿಡ್ನಿ ಕತೆ

ದೇವರು ದೊಡ್ಡವನು. ಮನುಷ್ಯನಿಗೆ ಅನುಕೂಲವಾಗಲೆಂದೇ ಎರಡು ಕಿಡ್ನಿಗಳನ್ನು ನೀಡಿದ್ದಾನೆ!

ಚೀನಾದ ಬೀಜಿಂಗ್‌ನ ಜಿನ್‌ಹುವಾ ನಗರದ ದೊನ್‌ಗ್ಯಾಂಗ್ ಪೀಪಲ್ಸ್ ಆಸ್ಪತ್ರೆಯಲ್ಲಿ ದಿನಾಂಕ ೨೮.೦೭.೨೦೧೫ರಂದು ಮಂಗಳವಾರ ದಿನದಂದು ಸತತವಾಗಿ ಎರಡು ತಾಸುಗಳವರೆಗೆ ನಡೆದ ತುರ್ತು ಶಸ್ತ್ರಚಿಕಿತ್ಸೆಯಲ್ಲಿ ಹೇ ಡಾಂಗ್ ಎಂಬ ವ್ಯಕ್ತಿಯ ಎಡಬದಿಯ ಕಿಡ್ನಿಯಿಂದ ಸುಮಾರು ೪೨೦ ಕಲ್ಲುಗಳನ್ನು ವೈದ್ಯರು ಹೊರತೆಗೆದು ವ್ಯಕ್ತಿಯನ್ನು ಬದುಕಿಸಿದ್ದಾರೆ.

ಈ ವ್ಯಕ್ತಿ ಹೆಚ್ಚು ಜಿಪ್ಸಂ ಟೊಪು ಖಾದ್ಯ (ಬರೀ ಖನಿಜಯುಕ್ತ ಆಹಾರವನ್ನು) ಸೇವಿಸುತ್ತಿದ್ದ ಹಾಗೂ ನೀರು ಕುಡಿಯುವ ಹವ್ಯಾಸವೇ ಇರಲಿಲ್ಲ..!

“ಈ ಸೋಯಾ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲ್ಸಿಯಂ ಇರುತ್ತದೆ. ಜಿಪ್ಸಂ ಟೊಪು ಸಹ ಅದರಿಂದಲೇ ತಯಾರಾಗುತ್ತಿದ್ದು ಹೆಚ್ಚಿನ ನೀರು ಕುಡಿದು ಬೆವರು ಭಸಿಯುವ ಕೆಲಸ ಮಾಡುವುದರಿಂದ ಮಾತ್ರ ಈ ಥರದ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯ…” ಎಂದು ವೈದ್ಯರಾದ ವೈಯುಬಿನ್ ಅವರು ವಿವರಿಸಿದ್ದಾರೆ.

ಹೇ ಡಾಂಗ್‌ಂಗೆ ತೀವ್ರ ಹೊಟ್ಟೆ ನೋವು ಕಾಣಿಸಿದ್ದರಿಂದ ಸಿಟಿ ಸ್ಕ್ಯಾನ್ ಮಾಡಲಾಯಿತು. ಕಿಡ್ನಿಯಲ್ಲಿ ಅಪಾರ ಪ್ರಮಾಣದಲ್ಲಿ ಕಲ್ಲುಗಳು ತುಂಬಿ ತುಂಬಿ ಹೋಗಿದ್ದವು! ಆಗ ಸತತವಾಗಿ ಎರಡು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ೪೫ ನಿಮಿಷಗಳಲ್ಲಿ ಕಲ್ಲುಗಳನ್ನು ಹೊರತೆಗೆಯಲಾಯಿತು. ಅಷ್ಟೊಂದು ಕಲ್ಲುಗಳನ್ನು ತೆಗೆದು ನನ್ನ ಕೈ ಹಾಗೂ ಬೆರಳುಗಳು ಮರಗಟ್ಟಿದ್ದವು…. ಎಂದು ವೈದ್ಯರು ಅಲ್ಲಿ ಸೇರಿದ್ದ ಜನರಿಗೆ ವಿವರಿಸಿದರು.

ಆದ್ದರಿಂದ ಪ್ರತಿಯೊಬ್ಬರು ಪ್ರತಿನಿತ್ಯ ೨-೩ ಲೀಟರ್ ನೀರನ್ನು ಕಡಿಮೆ ಎಂದರೂ ಕುಡಿಯಲೇಬೇಕು. ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಕಿಡ್ನಿಗಳು ಸರಿಯಾಗಿ ಕೆಲಸ ಮಾಡಲು ನೀರು ಬೇಕೇಬೇಕು.

ಆದ್ದರಿಂದ ಹೆಚ್ಚು ಹೆಚ್ಚು ದ್ರವರೂಪದ ಆಹಾರ ಸೇವಿಸಲೇ ಬೇಕು. ಏನಂತಿರಾ?! ಹೌದು ಅಂತೀರಿ. ಅನ್ನಲೇಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...