Home / ಕವನ / ಕವಿತೆ / ಜಾಗತೀಕರಣದ ಹೊಸಿಲಲ್ಲಿ ನಿಂತಿರುವ ರೈತನಿಗೊಂದು ಕಿವಿಮಾತು

ಜಾಗತೀಕರಣದ ಹೊಸಿಲಲ್ಲಿ ನಿಂತಿರುವ ರೈತನಿಗೊಂದು ಕಿವಿಮಾತು

ಯಾವಾಗ ನೋಡಿದ್ರೂ
ಜರಿಶಾಲು, ರೇಷ್ಮೆ ಪೇಟ
ದೀಪಾ-ಧೂಪಾ
ಹೂವು-ಹಾರ ಜೊತೆಗೆ
ನಾಯಕರ ನಗೂ ಮುಖ
ಹೊತ್ಕೊಂಡು ಬರ್‍ತಾ ಇದ್ದ
ಪೇಪರ್‌ನಾಗೆ ನಿನ್ನ
ಸುದ್ದಿನೂ ಓದ್ದೇ ಕಣಪ್ಪಾ…

ದಿಕ್ಕಿಲ್ಲದಂಗೆ ರಾಶಿ ಬಿದ್ದಿದ್ದ
ಟೊಮೊಟೊ, ಆಲೂಗಡ್ಡೆ, ಮೆಕ್ಕೆಜೋಳದ
ಜತೆಗೆ ಕಂಗಾಲಾಗಿ ಕೂತಿದ್ದ
ನಿನ್ನ ಚಿತ್ರಾನೂ ಮುಖಪುಟದಾಗೆ
ನೋಡ್ದೆ ಕಣಪ್ಪಾ

ಅಲ್ಲಾ ಕಣಪ್ಪಾ…
ಭಾರತಾಂಬೆಯ ಬೆನ್ನೆಲುಬು
ಅಂತ ಯಾಮಾರಿ ಕುಂತಿದ್ಯಲ್ಲಾ
ಈಗ ನೋಡು…
ನೀ ಯಾರ ಅಂತ
ಕೇಳೋರು ಇಲ್ಲ…

ನೀ ಹತ್ತು ಪೈಸೆಗೆ ಮಾರೋದನ್ನ
ಹತ್ತು ರೂಪಾಯಿಗೆ ತಕ್ಕೊಳೋ
ನಾ ಹೇಳ್ತೀನಿ ಕೇಳು…

ನೀ ಹದರಬೇಡ
ಇಲಿ ಪಾಷಾಣ
ಕೀಟ ನಾಶಕ ಕುಡ್ದು
ಜೀವ ತಕ್ಕೊಬ್ಯಾಡ

ಭೂಮಿ-ಕಾಣಿ, ಮಳೆ-ಬೇಳೆ
ಎಲ್ಲಾ ಮರ್‍ತು ಬಿಡು
ನೀ ಬಿತ್ತೋದೂ ಬ್ಯಾಡ
ನೀ ಬೆಳೆಯೋದೂ ಬ್ಯಾಡ
ಕೈ ಕೆಸರು ಮಾಡಿಕೊಳ್ಳೋದೂ ಬ್ಯಾಡ
ಬೆವರ ಸುರಿಸೋದೂ ಬ್ಯಾಡ
ನುಸಿ ಪೀಡೆ, ಕೀಟ ಬಾಧೆ, ಪೇಟೆ ಧಾರಣೆ
ಅಂತ ತಲೆಕೆಡಿಸಿಕೊಳ್ಳಬ್ಯಾಡ
ಅಕ್ಕಿ, ರಾಗಿ, ಕೊತ್ತಿಮಿರಿ, ಕರಿಬೇವು
ಎಲ್ಲಾ ಅಮೇರಿಕಾದಿಂದ ಬರುತ್ತೆ
ನೀ ಸುಮ್ಕಿದ್ದು ಬಿಡು ಆರಾಮ…

ಆ ಹಳೆ ಪಂಚೆ
ಹರಕಲು ಚಡ್ಡಿ
ಹವಾಯಿ ಚಪ್ಪಲಿ
ಮೋಟು ಬೀಡಿ ಮೊದ್ಲು ಬಿಸಾಕು
ಜೀನ್ಸ್ ಪ್ಯಾಂಟು, ರಂಗೀಲಾ ಷರಟು
ಮೊದ್ಲು ತೊಟ್ಕೊ…

ಪಿಜ್ಜಾ ತಿನ್ನು, ಕೋಲಾ ಕುಡಿ
ಪ್ಯಾಕ್‌ನಲ್ಲಿ ಮಡಗಿರೋ
ಚಿಕನ್ನು, ಮಟನ್ನು ತಿಂದು
ಪಾಪು, ರ್‍ಯಾಪು ಕೇಳ್ತಾ
ಟಿ. ವಿ. ನಲ್ಲಿ W.W.F ನೋಡ್ತಾ ಮೊಬೈಲ್‌ನಲ್ಲಿ ಕಷ್ಟ-ಸುಖ
ಇಚಾರಿಸ್ತ ಸುಮ್ಕಿದ್ದು ಬಿಡು ಆರಾಮ…
ಹಾಂ… ಹಾಗೆ… ಹಾಗೆ…
ನೋಡ್ತಾ ಇರು ಹ್ಯಾಗೆ
ಹ್ಯಾಗೆ ಆಗುತ್ತೆ ಮ್ಯಾಜಿಕ್ಕು!
ನಿನ್ನೂರು ಮಂಗಾಪುರ ಅಲ್ವಾ?
ಈಗ ನೋಡು…
ಹ್ಯಾಗೆ ಆಗಿದೆ ಸಿಂಗಾಪುರ!

ನೋಡ್ತಾ ಇರು…
ಹೈಟೆಕ್ ಆಸ್ಪತ್ರೆ ಬತ್ತದೆ
ಯಮಗಾತ್ರ ಪವರ್ ಪ್ರಾಜೆಕ್ಟ್ ಬಂದು
ರಾತ್ರಿ-ಹಗಲು ದೀಪ ಉರೀತದೆ
ಕುಡಿಯೋ ನೀರು ಬಾಟ್ಲಿನಲ್ಲಿ
ತಂತಾನೆ ತುಂಬ್ಕೊಂಡು
ಮನೆ ಬಾಗಿಲಿಗೆ ಬಂದು ಬೀಳ್ತದೆ

ಎತ್ತಿನ ಬಂಡಿಗಳು
ಏರೋಪ್ಲೇನ್ ಥರಾ ಹಾರ್‍ಕೋತ
ಸೀದಾ ದಿಲ್ಲಿಗೇ ಹೋಗ್ಬೇಕು
ಆಪಾಟಿ ರಸ್ತೆಗೋಳು ಬತ್ತವೆ
ನಿನ್ನ ಮಕ್ಕಳು, ಮರಿಮಕ್ಕಳು
ದೊಡ್ಡ ದೊಡ್ಡ ಶಾಲೆಗೆ ಹೋಗ್ತಾವೆ
ಎ. ಬಿ. ಸಿ. ಡಿ ಕಲಿತಾವೆ
ಅಮೆರಿಕೆಗೆ ಹಾರಿ
ಕೊಪ್ಪರಿಗೆ ಹಣ ಬಾಚ್ತಾವೆ…

ಹಬ್ಬೆಟ್ಟು-ಛಾಪಾಕಾಗದ
ಸಾಲ, ಬಡ್ಡಿ, ಜಪ್ತಿ
ಉಹುಂ ಕನಸಿನಲ್ಲೂ ಯೋಚಿಸಬ್ಯಾಡ
ನೀ…ರಾಮ-ಕೃಷ್ಣ ಅನ್ನೋದು ಬ್ಯಾಡ
ಕಂಪ್ಯೂಟರ್ ದೇವತೆ
ನಿನ್ನ ಮೈಮ್ಯಾಲೆ ಬಂದು
ಖಂಡಿತ ಮೋಕ್ಷ ಕಾಣಿಸ್ತಾಳ…

ಅದಕ್ಕೆ ಕಣಪ್ಪಾ ನಾ ಹೇಳ್ತೀನೀ ಕೇಳು…
ನೀ ಸುಮ್ಕಿದ್ದು ಬಿಡು…
ಬಾಯ್ ಮುಚ್ಕೊಂಡು… ಕಿವಿ ಮುಚ್ಕೊಂಡು…
ಕಣ್ಣು ಮುಚ್ಕೊಂಡು…

ಹಾಂ ಹಾಗೆ… ಹಾಗೆ…
ಉಸಿರೆತ್ತಬ್ಯಾಡ….
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...