ಜಾಗತೀಕರಣದ ಹೊಸಿಲಲ್ಲಿ ನಿಂತಿರುವ ರೈತನಿಗೊಂದು ಕಿವಿಮಾತು

ಯಾವಾಗ ನೋಡಿದ್ರೂ
ಜರಿಶಾಲು, ರೇಷ್ಮೆ ಪೇಟ
ದೀಪಾ-ಧೂಪಾ
ಹೂವು-ಹಾರ ಜೊತೆಗೆ
ನಾಯಕರ ನಗೂ ಮುಖ
ಹೊತ್ಕೊಂಡು ಬರ್‍ತಾ ಇದ್ದ
ಪೇಪರ್‌ನಾಗೆ ನಿನ್ನ
ಸುದ್ದಿನೂ ಓದ್ದೇ ಕಣಪ್ಪಾ…

ದಿಕ್ಕಿಲ್ಲದಂಗೆ ರಾಶಿ ಬಿದ್ದಿದ್ದ
ಟೊಮೊಟೊ, ಆಲೂಗಡ್ಡೆ, ಮೆಕ್ಕೆಜೋಳದ
ಜತೆಗೆ ಕಂಗಾಲಾಗಿ ಕೂತಿದ್ದ
ನಿನ್ನ ಚಿತ್ರಾನೂ ಮುಖಪುಟದಾಗೆ
ನೋಡ್ದೆ ಕಣಪ್ಪಾ

ಅಲ್ಲಾ ಕಣಪ್ಪಾ…
ಭಾರತಾಂಬೆಯ ಬೆನ್ನೆಲುಬು
ಅಂತ ಯಾಮಾರಿ ಕುಂತಿದ್ಯಲ್ಲಾ
ಈಗ ನೋಡು…
ನೀ ಯಾರ ಅಂತ
ಕೇಳೋರು ಇಲ್ಲ…

ನೀ ಹತ್ತು ಪೈಸೆಗೆ ಮಾರೋದನ್ನ
ಹತ್ತು ರೂಪಾಯಿಗೆ ತಕ್ಕೊಳೋ
ನಾ ಹೇಳ್ತೀನಿ ಕೇಳು…

ನೀ ಹದರಬೇಡ
ಇಲಿ ಪಾಷಾಣ
ಕೀಟ ನಾಶಕ ಕುಡ್ದು
ಜೀವ ತಕ್ಕೊಬ್ಯಾಡ

ಭೂಮಿ-ಕಾಣಿ, ಮಳೆ-ಬೇಳೆ
ಎಲ್ಲಾ ಮರ್‍ತು ಬಿಡು
ನೀ ಬಿತ್ತೋದೂ ಬ್ಯಾಡ
ನೀ ಬೆಳೆಯೋದೂ ಬ್ಯಾಡ
ಕೈ ಕೆಸರು ಮಾಡಿಕೊಳ್ಳೋದೂ ಬ್ಯಾಡ
ಬೆವರ ಸುರಿಸೋದೂ ಬ್ಯಾಡ
ನುಸಿ ಪೀಡೆ, ಕೀಟ ಬಾಧೆ, ಪೇಟೆ ಧಾರಣೆ
ಅಂತ ತಲೆಕೆಡಿಸಿಕೊಳ್ಳಬ್ಯಾಡ
ಅಕ್ಕಿ, ರಾಗಿ, ಕೊತ್ತಿಮಿರಿ, ಕರಿಬೇವು
ಎಲ್ಲಾ ಅಮೇರಿಕಾದಿಂದ ಬರುತ್ತೆ
ನೀ ಸುಮ್ಕಿದ್ದು ಬಿಡು ಆರಾಮ…

ಆ ಹಳೆ ಪಂಚೆ
ಹರಕಲು ಚಡ್ಡಿ
ಹವಾಯಿ ಚಪ್ಪಲಿ
ಮೋಟು ಬೀಡಿ ಮೊದ್ಲು ಬಿಸಾಕು
ಜೀನ್ಸ್ ಪ್ಯಾಂಟು, ರಂಗೀಲಾ ಷರಟು
ಮೊದ್ಲು ತೊಟ್ಕೊ…

ಪಿಜ್ಜಾ ತಿನ್ನು, ಕೋಲಾ ಕುಡಿ
ಪ್ಯಾಕ್‌ನಲ್ಲಿ ಮಡಗಿರೋ
ಚಿಕನ್ನು, ಮಟನ್ನು ತಿಂದು
ಪಾಪು, ರ್‍ಯಾಪು ಕೇಳ್ತಾ
ಟಿ. ವಿ. ನಲ್ಲಿ W.W.F ನೋಡ್ತಾ ಮೊಬೈಲ್‌ನಲ್ಲಿ ಕಷ್ಟ-ಸುಖ
ಇಚಾರಿಸ್ತ ಸುಮ್ಕಿದ್ದು ಬಿಡು ಆರಾಮ…
ಹಾಂ… ಹಾಗೆ… ಹಾಗೆ…
ನೋಡ್ತಾ ಇರು ಹ್ಯಾಗೆ
ಹ್ಯಾಗೆ ಆಗುತ್ತೆ ಮ್ಯಾಜಿಕ್ಕು!
ನಿನ್ನೂರು ಮಂಗಾಪುರ ಅಲ್ವಾ?
ಈಗ ನೋಡು…
ಹ್ಯಾಗೆ ಆಗಿದೆ ಸಿಂಗಾಪುರ!

ನೋಡ್ತಾ ಇರು…
ಹೈಟೆಕ್ ಆಸ್ಪತ್ರೆ ಬತ್ತದೆ
ಯಮಗಾತ್ರ ಪವರ್ ಪ್ರಾಜೆಕ್ಟ್ ಬಂದು
ರಾತ್ರಿ-ಹಗಲು ದೀಪ ಉರೀತದೆ
ಕುಡಿಯೋ ನೀರು ಬಾಟ್ಲಿನಲ್ಲಿ
ತಂತಾನೆ ತುಂಬ್ಕೊಂಡು
ಮನೆ ಬಾಗಿಲಿಗೆ ಬಂದು ಬೀಳ್ತದೆ

ಎತ್ತಿನ ಬಂಡಿಗಳು
ಏರೋಪ್ಲೇನ್ ಥರಾ ಹಾರ್‍ಕೋತ
ಸೀದಾ ದಿಲ್ಲಿಗೇ ಹೋಗ್ಬೇಕು
ಆಪಾಟಿ ರಸ್ತೆಗೋಳು ಬತ್ತವೆ
ನಿನ್ನ ಮಕ್ಕಳು, ಮರಿಮಕ್ಕಳು
ದೊಡ್ಡ ದೊಡ್ಡ ಶಾಲೆಗೆ ಹೋಗ್ತಾವೆ
ಎ. ಬಿ. ಸಿ. ಡಿ ಕಲಿತಾವೆ
ಅಮೆರಿಕೆಗೆ ಹಾರಿ
ಕೊಪ್ಪರಿಗೆ ಹಣ ಬಾಚ್ತಾವೆ…

ಹಬ್ಬೆಟ್ಟು-ಛಾಪಾಕಾಗದ
ಸಾಲ, ಬಡ್ಡಿ, ಜಪ್ತಿ
ಉಹುಂ ಕನಸಿನಲ್ಲೂ ಯೋಚಿಸಬ್ಯಾಡ
ನೀ…ರಾಮ-ಕೃಷ್ಣ ಅನ್ನೋದು ಬ್ಯಾಡ
ಕಂಪ್ಯೂಟರ್ ದೇವತೆ
ನಿನ್ನ ಮೈಮ್ಯಾಲೆ ಬಂದು
ಖಂಡಿತ ಮೋಕ್ಷ ಕಾಣಿಸ್ತಾಳ…

ಅದಕ್ಕೆ ಕಣಪ್ಪಾ ನಾ ಹೇಳ್ತೀನೀ ಕೇಳು…
ನೀ ಸುಮ್ಕಿದ್ದು ಬಿಡು…
ಬಾಯ್ ಮುಚ್ಕೊಂಡು… ಕಿವಿ ಮುಚ್ಕೊಂಡು…
ಕಣ್ಣು ಮುಚ್ಕೊಂಡು…

ಹಾಂ ಹಾಗೆ… ಹಾಗೆ…
ಉಸಿರೆತ್ತಬ್ಯಾಡ….
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೧೦
Next post ಇರು

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಪ್ಲೇಗುಮಾರಿಯ ಹೊಡೆತ

    ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ;… Read more…

  • ಜಂಬದ ಕೋಳಿ

    ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್‍ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್‍ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…