Home / ಕವನ / ಕವಿತೆ / ಹೆಣ್ಣು ಜೀವ

ಹೆಣ್ಣು ಜೀವ

ಸೋನೆ ಮಳೆಯ ಸಂಜೆ…
ಒಲೆಯ ಮೇಲೆ ಚಹಾ ಕುದಿಯುತ್ತಾ ಇತ್ತು
ದೀಪ ಹಚ್ಚಿ, ಧೂಪ ಹಾಕಿ, ದೇವರನ್ನು ಬೆಚ್ಚಗಾಗಿಸಿ
ಸ್ವೆಟರ್ ಏರಿಸಿ ಹಾಳೂರು..
ಎಂದು ಇಲ್ಲದ ಕರೆಂಟಿಗೆ ಬಾಯ್ತುಂಬ ಬಯ್ದು
ದೀಪ ಧಾರಿಣಿಯಾದೆ,
ಗಾಳಿ ಬಾಗಿಲ ತಳ್ಳಿತು

ಎದುರಲ್ಲಿ ತೊಯ್ದು ತೊಪ್ಪೆಯಾಗಿ ನಿಂತಿತ್ತು ಹೆಣ್ಣು ಜೀವ
ಆತುಕೊಂಡಿದ್ದ ಎಳೆಯ ಕಂದಮ್ಮಗಳ ಜೋಡಿ
ಹಾಕಿದವು ಮೋಡಿ, ತುಸುವೆ ಮೆದುವಾಯಿತು ಭಾವ
ಕೇಳದೆಯೇ ಹೇಳದೆಯೇ
ಎಲ್ಲವೂ ಅರ್ಥವಾದಂತೆ, ಭಾಷೆಯ ಹಂಗಿಲ್ಲದೆ
ನೇರ ಹೃದಯವನೆ ಮುಟ್ಟಿದಂತೆ.

ಏನೂ ಮಾಡಲು ತೋಚದೆ…
ಆರಿ ಹೋಗಲಿದ್ದ ದೀಪಕ್ಕೆ ಅಡ್ಡ ಕೈ ಹಿಡಿದು
ಒಳಗೆ ಬಂದೆ, ಹೊರಗೆ ಹೋದೆ…
ದೀಪ ಹೊಯ್ದಾಡುತ್ತಾ ಇತ್ತು
ತೀರಿಕೊಂಡ ಅಜ್ಜಿ, ದೊಡ್ಡವ್ವ, ಶಕ್ಕು….
ಯಾರೆಲ್ಲ ನಿಂತಂತಾಗಿ ಕಣ್ಣೆದುರು –
ಜಗುಲಿಯ ಮೂಲೆಗೆ ಗೋಣಿ ಹಾಸಿ
ಬಟ್ಟಲಿಗೆ ಬಿಸಿ ಹಾಲು ಅನ್ನ ಸುರಿದು
ಬಾಗಿಲು ಮುಚ್ಚಿ ಕಿಟಕಿ ತರೆದೆ
ಇದೀಗ-
ಕಂದಮ್ಮಗಳು ಸಮರೋಪಾದಿಯಲ್ಲಿ
ಅಮ್ಮನ ಮೊಲೆಗೆ ಬಾಯಿಟ್ಟು
ಹಾಲು ಹೀರುತ್ತಿದ್ದವು
ತಾಯಿ ಬೆಚ್ಚಗೆ ಕಣ್ಮುಚ್ಚಿ ಮಲಗಿತ್ತು
ವಾಸನೆ ಹಿಡಿದು ತುಸುವೆ ಬಾಲ ಅಲ್ಲಾಡಿಸಿ

ನನ್ನ ಗುರುತಿಸಿತು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...