ಸಾಧುರಿಗೊಂದಿಸುವೇ ನಿತ್ಯದಿ ದಿವ್ಯ

ಸಾಧುರಿಗೊಂದಿಸುವೇ ನಿತ್ಯದಿ ದಿವ್ಯ
ಸಾಧುರಿಗೊಂದಿಸುವೇ                                      ||ಪ||

ಬೇಧವನಳಿದಾತ್ಮ ಭೋಧವ ತಿಳಿಯುತಾ
ಕ್ರೋಧಾದಿಗಳ ಸುಟ್ಟು ಮೋದದಿಂದಿರುವಂಥ                  ||೧||

ಕಾಲಕರ್ಮವ ತುಳಿದು ಕಾಲಿಲೆ ಒದ್ದು
ಮೂಲ ಮಾಯವನಳಿದು
ಆಲಿಗಳ ಬಲದಲ್ಲಿ ಬ್ರಹ್ಮನ
ಸಾಲು ಜ್ಯೋತಿಯ ಬೆಳಕಿನಿಂದಲಿ
ಮಾಲಿನೊಳಿಹ ಮೇಲು ಮೂರ್ತಿಯ
ಕೀಲವನು ಬಲ್ಲಂಥ ಮಹಿಮದ                            ||೨||

ಕ್ಲೇಶಪಾಶ ಕೆಡಿಸಿ ಮಾಯಾಂಗನೆಯಾ
ಆಸೆ ಎಲ್ಲವ ಬಿಡಿಸಿ
ದೋಷಭವದುರಿತನಾಶಾ
ಶಿಶುನಾಳೇಶನೊಳು ಮನ ಮುಳುಗಿ ನಿತ್ಯದಿ
ರಾಶಿ ತಾಪವ ತೊಳೆದು
ಕರ್ಮ ವಿವಂಶರೆನಿಸುವ ಭಾಸುರಾಗಿಹ                       ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಂದು ನಮ್ಮದು, ಮತ್ತೊಂದು ದೇಶದ್ದು
Next post ಬಾ ನೋಡುನು ಭಾಮಿನಿ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…