Home / ಕವನ / ಕವಿತೆ / ಕಾಣೆಯಾದವರು

ಕಾಣೆಯಾದವರು

ಪ್ರತಿ ಮುಂಜಾನೆ…
ಪತ್ರಿಕೆಗಳಲ್ಲಿ ಸುದ್ದಿ… ಜಾಹೀರಾತು,
ಪ್ರತಿ ದಿನ… ಆಕಾಶವಾಣಿಯಲ್ಲಿ
ಪ್ರತಿ ಸಂಜೆ… ದೂರದರ್ಶನದಲ್ಲಿ
ತಪ್ಪದೆ ಬಿತ್ತರಿಸುವ ಕಾರ್ಯಕ್ರಮ –
ಕಾಣೆಯಾದವರು!

ಬರಿಯ ನಮ್ಮೂರಿನಲ್ಲಿಯೇ
ದಿನಕ್ಕೆ ನಾಲೈದು ಜನ.
ಬೇರೆ ಬೇರೆ ಕೇಂದ್ರಗಳಲ್ಲಿ
ನೂರಾರು ಜನ ಪ್ರತಿ ದಿನ.
ತಿಂಗಳಿಗೆ-ವರ್ಷಕ್ಕೆ?
ಕಾಣೆಯಾಗುವರೆ
ಸಾವಿರ ಸಾವಿರ ಜನ?
ಆಬಾಲ ವೃದ್ಧರವರೆಗೆ
ಗಂಡು-ಹೆಣ್ಣು
ಸುಂದರ-ಕುರೂಪ
ನಿರಾಸೆ-ನಿರ್ಲಿಪ್ತ
ಬಗೆ ಬಗೆಯ ಮುಖಗಳು
ನೀಳ ಮೂಗು- ಕೋಲು ಮುಖ
ಗೋಧಿ ಬಣ್ಣ, ಎಣ್ಣೆಗೆಂಪು ಬಣ್ಣ
ತೇಜೋರಹಿತ, ಕಳಾಹೀನ ಕಣ್ಣ
ನಿತ್ರಾಣ, ನಿರಾಧಾರ ಮನುಜರು
ಮಾನಸಿಕ ಅಸ್ವಸ್ಥರು
ಪರೀಕ್ಷೆಗಳಲ್ಲಿ ಫೇಲಾದವರು
ಸಾಲ ತೀರಿಸಲಾಗದೆ ತಲೆಮರೆಸಿಕೊಂಡವರು
ಭಗ್ನ ಪ್ರೇಮಿಗಳು, ಹೇಡಿಗಳು
ಗೃಹ ಕಲಹದಗ್ನಿಯಲ್ಲಿ ದಹಿಸಿದವರು
ಶೀತಲ ಯುದ್ಧದಲ್ಲಿ ಸೋತು ನೋಂದವರು
ಓಡಿಹೋದವರು, ಕಳುವಾದವರು
ಎಷ್ಟೆಲ್ಲ ಜನ… ಕಾಣೆಯಾದವರು!

ಸಾಕಾಯಿತೆ ಸಂಸಾರ ಸಾಗರ
ಸಾವು ನೋವಿನ ಘೋರ ಸಮರ
ಹರಿಯಿತೆ ಆತ್ಮೀಯತೆಯ ಮೋಹ
ಕಡಿದೇ ಹೋಯಿತೇ ಬಾಳ ಬಂಧನ?
ಇಲ್ಲಿನದಕ್ಕಿಂತ ಅಲ್ಲಿನದು
ಅಲ್ಲಿನದಕ್ಕಿಂತ ಮತ್ತೊಂದು
ಸೊಗಸೆಂಬ ಭ್ರಮೆಯೆ?
ತನ್ನ ದೆಲ್ಲವ ತೊರೆದು
ಇಟ್ಟ ಹೆಸರನೂ ಬಿಟ್ಟು
ದೂರ ಹೋಗುವ ಸಮಯ –
ಪ್ರಾಣ ಪ್ರಯಾಣ ಸಮಯ
ಬರುವ ನಿರೀಕ್ಷೆಯ ಕೋಶಾವಸ್ಥೆಯೇ?
ಸ್ಥಿತ ಪ್ರಜ್ಞನ ಸಮಾಧಿ ಸ್ಥಿತಿಯೇ?
ಜನಸಾಗರದಲ್ಲಿ ಕೊಚ್ಚಿ ಹೋದ
ಜೀವಚ್ಛವವೇ?
*****
೨೯-೦೮-೧೯೯೩

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...