Home / ಕವನ / ಕವಿತೆ / ಕಾಣೆಯಾದವರು

ಕಾಣೆಯಾದವರು

ಪ್ರತಿ ಮುಂಜಾನೆ…
ಪತ್ರಿಕೆಗಳಲ್ಲಿ ಸುದ್ದಿ… ಜಾಹೀರಾತು,
ಪ್ರತಿ ದಿನ… ಆಕಾಶವಾಣಿಯಲ್ಲಿ
ಪ್ರತಿ ಸಂಜೆ… ದೂರದರ್ಶನದಲ್ಲಿ
ತಪ್ಪದೆ ಬಿತ್ತರಿಸುವ ಕಾರ್ಯಕ್ರಮ –
ಕಾಣೆಯಾದವರು!

ಬರಿಯ ನಮ್ಮೂರಿನಲ್ಲಿಯೇ
ದಿನಕ್ಕೆ ನಾಲೈದು ಜನ.
ಬೇರೆ ಬೇರೆ ಕೇಂದ್ರಗಳಲ್ಲಿ
ನೂರಾರು ಜನ ಪ್ರತಿ ದಿನ.
ತಿಂಗಳಿಗೆ-ವರ್ಷಕ್ಕೆ?
ಕಾಣೆಯಾಗುವರೆ
ಸಾವಿರ ಸಾವಿರ ಜನ?
ಆಬಾಲ ವೃದ್ಧರವರೆಗೆ
ಗಂಡು-ಹೆಣ್ಣು
ಸುಂದರ-ಕುರೂಪ
ನಿರಾಸೆ-ನಿರ್ಲಿಪ್ತ
ಬಗೆ ಬಗೆಯ ಮುಖಗಳು
ನೀಳ ಮೂಗು- ಕೋಲು ಮುಖ
ಗೋಧಿ ಬಣ್ಣ, ಎಣ್ಣೆಗೆಂಪು ಬಣ್ಣ
ತೇಜೋರಹಿತ, ಕಳಾಹೀನ ಕಣ್ಣ
ನಿತ್ರಾಣ, ನಿರಾಧಾರ ಮನುಜರು
ಮಾನಸಿಕ ಅಸ್ವಸ್ಥರು
ಪರೀಕ್ಷೆಗಳಲ್ಲಿ ಫೇಲಾದವರು
ಸಾಲ ತೀರಿಸಲಾಗದೆ ತಲೆಮರೆಸಿಕೊಂಡವರು
ಭಗ್ನ ಪ್ರೇಮಿಗಳು, ಹೇಡಿಗಳು
ಗೃಹ ಕಲಹದಗ್ನಿಯಲ್ಲಿ ದಹಿಸಿದವರು
ಶೀತಲ ಯುದ್ಧದಲ್ಲಿ ಸೋತು ನೋಂದವರು
ಓಡಿಹೋದವರು, ಕಳುವಾದವರು
ಎಷ್ಟೆಲ್ಲ ಜನ… ಕಾಣೆಯಾದವರು!

ಸಾಕಾಯಿತೆ ಸಂಸಾರ ಸಾಗರ
ಸಾವು ನೋವಿನ ಘೋರ ಸಮರ
ಹರಿಯಿತೆ ಆತ್ಮೀಯತೆಯ ಮೋಹ
ಕಡಿದೇ ಹೋಯಿತೇ ಬಾಳ ಬಂಧನ?
ಇಲ್ಲಿನದಕ್ಕಿಂತ ಅಲ್ಲಿನದು
ಅಲ್ಲಿನದಕ್ಕಿಂತ ಮತ್ತೊಂದು
ಸೊಗಸೆಂಬ ಭ್ರಮೆಯೆ?
ತನ್ನ ದೆಲ್ಲವ ತೊರೆದು
ಇಟ್ಟ ಹೆಸರನೂ ಬಿಟ್ಟು
ದೂರ ಹೋಗುವ ಸಮಯ –
ಪ್ರಾಣ ಪ್ರಯಾಣ ಸಮಯ
ಬರುವ ನಿರೀಕ್ಷೆಯ ಕೋಶಾವಸ್ಥೆಯೇ?
ಸ್ಥಿತ ಪ್ರಜ್ಞನ ಸಮಾಧಿ ಸ್ಥಿತಿಯೇ?
ಜನಸಾಗರದಲ್ಲಿ ಕೊಚ್ಚಿ ಹೋದ
ಜೀವಚ್ಛವವೇ?
*****
೨೯-೦೮-೧೯೯೩

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...