Home / ಕವನ / ಕವಿತೆ / ಕಾಣೆಯಾದವರು

ಕಾಣೆಯಾದವರು

ಪ್ರತಿ ಮುಂಜಾನೆ…
ಪತ್ರಿಕೆಗಳಲ್ಲಿ ಸುದ್ದಿ… ಜಾಹೀರಾತು,
ಪ್ರತಿ ದಿನ… ಆಕಾಶವಾಣಿಯಲ್ಲಿ
ಪ್ರತಿ ಸಂಜೆ… ದೂರದರ್ಶನದಲ್ಲಿ
ತಪ್ಪದೆ ಬಿತ್ತರಿಸುವ ಕಾರ್ಯಕ್ರಮ –
ಕಾಣೆಯಾದವರು!

ಬರಿಯ ನಮ್ಮೂರಿನಲ್ಲಿಯೇ
ದಿನಕ್ಕೆ ನಾಲೈದು ಜನ.
ಬೇರೆ ಬೇರೆ ಕೇಂದ್ರಗಳಲ್ಲಿ
ನೂರಾರು ಜನ ಪ್ರತಿ ದಿನ.
ತಿಂಗಳಿಗೆ-ವರ್ಷಕ್ಕೆ?
ಕಾಣೆಯಾಗುವರೆ
ಸಾವಿರ ಸಾವಿರ ಜನ?
ಆಬಾಲ ವೃದ್ಧರವರೆಗೆ
ಗಂಡು-ಹೆಣ್ಣು
ಸುಂದರ-ಕುರೂಪ
ನಿರಾಸೆ-ನಿರ್ಲಿಪ್ತ
ಬಗೆ ಬಗೆಯ ಮುಖಗಳು
ನೀಳ ಮೂಗು- ಕೋಲು ಮುಖ
ಗೋಧಿ ಬಣ್ಣ, ಎಣ್ಣೆಗೆಂಪು ಬಣ್ಣ
ತೇಜೋರಹಿತ, ಕಳಾಹೀನ ಕಣ್ಣ
ನಿತ್ರಾಣ, ನಿರಾಧಾರ ಮನುಜರು
ಮಾನಸಿಕ ಅಸ್ವಸ್ಥರು
ಪರೀಕ್ಷೆಗಳಲ್ಲಿ ಫೇಲಾದವರು
ಸಾಲ ತೀರಿಸಲಾಗದೆ ತಲೆಮರೆಸಿಕೊಂಡವರು
ಭಗ್ನ ಪ್ರೇಮಿಗಳು, ಹೇಡಿಗಳು
ಗೃಹ ಕಲಹದಗ್ನಿಯಲ್ಲಿ ದಹಿಸಿದವರು
ಶೀತಲ ಯುದ್ಧದಲ್ಲಿ ಸೋತು ನೋಂದವರು
ಓಡಿಹೋದವರು, ಕಳುವಾದವರು
ಎಷ್ಟೆಲ್ಲ ಜನ… ಕಾಣೆಯಾದವರು!

ಸಾಕಾಯಿತೆ ಸಂಸಾರ ಸಾಗರ
ಸಾವು ನೋವಿನ ಘೋರ ಸಮರ
ಹರಿಯಿತೆ ಆತ್ಮೀಯತೆಯ ಮೋಹ
ಕಡಿದೇ ಹೋಯಿತೇ ಬಾಳ ಬಂಧನ?
ಇಲ್ಲಿನದಕ್ಕಿಂತ ಅಲ್ಲಿನದು
ಅಲ್ಲಿನದಕ್ಕಿಂತ ಮತ್ತೊಂದು
ಸೊಗಸೆಂಬ ಭ್ರಮೆಯೆ?
ತನ್ನ ದೆಲ್ಲವ ತೊರೆದು
ಇಟ್ಟ ಹೆಸರನೂ ಬಿಟ್ಟು
ದೂರ ಹೋಗುವ ಸಮಯ –
ಪ್ರಾಣ ಪ್ರಯಾಣ ಸಮಯ
ಬರುವ ನಿರೀಕ್ಷೆಯ ಕೋಶಾವಸ್ಥೆಯೇ?
ಸ್ಥಿತ ಪ್ರಜ್ಞನ ಸಮಾಧಿ ಸ್ಥಿತಿಯೇ?
ಜನಸಾಗರದಲ್ಲಿ ಕೊಚ್ಚಿ ಹೋದ
ಜೀವಚ್ಛವವೇ?
*****
೨೯-೦೮-೧೯೯೩

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...