ಸಾವು

ಪ್ರಾಣ ಇದ್ದವು
ಅದನ್ನು
ಕಳೆದುಕೊಂಡಾಗ
ಸಂಭವಿಸುವುದು
ಸಾವು.
ಸೂಕ್ಷ್ಮಾತಿ ಸೂಕ್ಷ್ಮಜೀವಿ,
ಜಲಚರ, ಪಶು, ಪಕ್ಷಿ
ಸಕಲ ಸಸ್ಯ, ವೃಕ್ಷ
ದೈತ್ಯ ಕಾಯ ಎಲ್ಲಕೂ
ನಿಶ್ಚಿತ.. ಸಾವು.
‘ಜಾತಸ್ಯ ಮರಣಂ ಧೃವಂ’.

ಮಾನವನ ಮಾತೇ ಬೇರೆ.
ಅವನ ಅಂತ್ಯಕ್ಕೆ
ಬರಬೇಕಿಲ್ಲ ಮರಣ.
ಸ್ವಲ್ಪವೂ ಇಲ್ಲದಾಗ ಹಣ
ಆಸ್ತಿಪಾಸ್ತಿಯ ಜೊತೆಗೆ
ಮಾನ ಮರ್ಯಾದೆ
ಎಲ್ಲವೂ ಹರಾಜಾದಾಗ
ಸುಖದ ಸೌಧ ಕುಸಿದಾಗ
ಬಂತವನ ‘ಆರ್ಥಿಕ ಮರಣ’.
ಅವನಾಗ ಸಜೀವ ಶವ!

ಮಾನ ಉಳ್ಳವ ‘ಮಾನವ’
ಹೋದರವನ ಮಾನ
ಬಂತವನ ಮರಣ.

ಪರಸ್ಪರ ದ್ವೇಷ-ಅಸೂಯೆ
ಶೀತಲ ಯುದ್ಧ,
ಹೊಲಸು ರಾಜಕೀಯ –
ವಿಷ ವರ್ತುಲದಲ್ಲಿ
ಸಿಲುಕಿ, ತೇಜೋವಧೆ
ಗೊಂಡವನ ಸ್ಥಿತಿ
“ಬೌದ್ಧಿಕ ಮರಣ”.
ತಲೆ ಕೆಟ್ಟು, ಕಳೆದು
ಚಿತ್ತ ಸ್ವಾಸ್ಥ್ಯ
ಹುಚ್ಚು ಹಿಡಿದು
ನಗ್ನನಾಗಿ ಸುತ್ತಿ ಅಲೆದು
ಯಾರಿಗೂ ಬೇಡವಾಗಿ
ಅರ್ಥವಿಲ್ಲದ ರಾಶಿ ಕಸ ಹೊತ್ತು
ಕಿರುಚಿ, ಕುಣಿದು, ನಕ್ಕು, ಅತ್ತು
ರಸ್ತೆಯ ಮೇಲೆ ಬಿದ್ದು
ಹೊರಳಿ, ಹೊರಳಿ, ಸಾಯಲಾರದೆ
ಕರ್ಮ ಕಳೆಯಲಾಗದೆ
ಕ್ರಿಮಿಯ ಬಾಳು ನಡೆಸಿ
‘ಜೀವನ್ಮರಣ’ ಪಡೆದವಗೆ
ಸಾವು…ಮೋಕ್ಷ.
ಸತ್ತು ಬದುಕಿದ!
*****
೧೪-೦೬-೧೯೯೨

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವಿಗಳ ಕವಿ ಎಜ್ರಾ ಪೌಂಡ್
Next post ದೀಪ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…