Home / ಕವನ / ಕವಿತೆ / ಸಾವು

ಸಾವು

ಪ್ರಾಣ ಇದ್ದವು
ಅದನ್ನು
ಕಳೆದುಕೊಂಡಾಗ
ಸಂಭವಿಸುವುದು
ಸಾವು.
ಸೂಕ್ಷ್ಮಾತಿ ಸೂಕ್ಷ್ಮಜೀವಿ,
ಜಲಚರ, ಪಶು, ಪಕ್ಷಿ
ಸಕಲ ಸಸ್ಯ, ವೃಕ್ಷ
ದೈತ್ಯ ಕಾಯ ಎಲ್ಲಕೂ
ನಿಶ್ಚಿತ.. ಸಾವು.
‘ಜಾತಸ್ಯ ಮರಣಂ ಧೃವಂ’.

ಮಾನವನ ಮಾತೇ ಬೇರೆ.
ಅವನ ಅಂತ್ಯಕ್ಕೆ
ಬರಬೇಕಿಲ್ಲ ಮರಣ.
ಸ್ವಲ್ಪವೂ ಇಲ್ಲದಾಗ ಹಣ
ಆಸ್ತಿಪಾಸ್ತಿಯ ಜೊತೆಗೆ
ಮಾನ ಮರ್ಯಾದೆ
ಎಲ್ಲವೂ ಹರಾಜಾದಾಗ
ಸುಖದ ಸೌಧ ಕುಸಿದಾಗ
ಬಂತವನ ‘ಆರ್ಥಿಕ ಮರಣ’.
ಅವನಾಗ ಸಜೀವ ಶವ!

ಮಾನ ಉಳ್ಳವ ‘ಮಾನವ’
ಹೋದರವನ ಮಾನ
ಬಂತವನ ಮರಣ.

ಪರಸ್ಪರ ದ್ವೇಷ-ಅಸೂಯೆ
ಶೀತಲ ಯುದ್ಧ,
ಹೊಲಸು ರಾಜಕೀಯ –
ವಿಷ ವರ್ತುಲದಲ್ಲಿ
ಸಿಲುಕಿ, ತೇಜೋವಧೆ
ಗೊಂಡವನ ಸ್ಥಿತಿ
“ಬೌದ್ಧಿಕ ಮರಣ”.
ತಲೆ ಕೆಟ್ಟು, ಕಳೆದು
ಚಿತ್ತ ಸ್ವಾಸ್ಥ್ಯ
ಹುಚ್ಚು ಹಿಡಿದು
ನಗ್ನನಾಗಿ ಸುತ್ತಿ ಅಲೆದು
ಯಾರಿಗೂ ಬೇಡವಾಗಿ
ಅರ್ಥವಿಲ್ಲದ ರಾಶಿ ಕಸ ಹೊತ್ತು
ಕಿರುಚಿ, ಕುಣಿದು, ನಕ್ಕು, ಅತ್ತು
ರಸ್ತೆಯ ಮೇಲೆ ಬಿದ್ದು
ಹೊರಳಿ, ಹೊರಳಿ, ಸಾಯಲಾರದೆ
ಕರ್ಮ ಕಳೆಯಲಾಗದೆ
ಕ್ರಿಮಿಯ ಬಾಳು ನಡೆಸಿ
‘ಜೀವನ್ಮರಣ’ ಪಡೆದವಗೆ
ಸಾವು…ಮೋಕ್ಷ.
ಸತ್ತು ಬದುಕಿದ!
*****
೧೪-೦೬-೧೯೯೨

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...