Home / ಕವನ / ಕವಿತೆ / ಸಾವು

ಸಾವು

ಪ್ರಾಣ ಇದ್ದವು
ಅದನ್ನು
ಕಳೆದುಕೊಂಡಾಗ
ಸಂಭವಿಸುವುದು
ಸಾವು.
ಸೂಕ್ಷ್ಮಾತಿ ಸೂಕ್ಷ್ಮಜೀವಿ,
ಜಲಚರ, ಪಶು, ಪಕ್ಷಿ
ಸಕಲ ಸಸ್ಯ, ವೃಕ್ಷ
ದೈತ್ಯ ಕಾಯ ಎಲ್ಲಕೂ
ನಿಶ್ಚಿತ.. ಸಾವು.
‘ಜಾತಸ್ಯ ಮರಣಂ ಧೃವಂ’.

ಮಾನವನ ಮಾತೇ ಬೇರೆ.
ಅವನ ಅಂತ್ಯಕ್ಕೆ
ಬರಬೇಕಿಲ್ಲ ಮರಣ.
ಸ್ವಲ್ಪವೂ ಇಲ್ಲದಾಗ ಹಣ
ಆಸ್ತಿಪಾಸ್ತಿಯ ಜೊತೆಗೆ
ಮಾನ ಮರ್ಯಾದೆ
ಎಲ್ಲವೂ ಹರಾಜಾದಾಗ
ಸುಖದ ಸೌಧ ಕುಸಿದಾಗ
ಬಂತವನ ‘ಆರ್ಥಿಕ ಮರಣ’.
ಅವನಾಗ ಸಜೀವ ಶವ!

ಮಾನ ಉಳ್ಳವ ‘ಮಾನವ’
ಹೋದರವನ ಮಾನ
ಬಂತವನ ಮರಣ.

ಪರಸ್ಪರ ದ್ವೇಷ-ಅಸೂಯೆ
ಶೀತಲ ಯುದ್ಧ,
ಹೊಲಸು ರಾಜಕೀಯ –
ವಿಷ ವರ್ತುಲದಲ್ಲಿ
ಸಿಲುಕಿ, ತೇಜೋವಧೆ
ಗೊಂಡವನ ಸ್ಥಿತಿ
“ಬೌದ್ಧಿಕ ಮರಣ”.
ತಲೆ ಕೆಟ್ಟು, ಕಳೆದು
ಚಿತ್ತ ಸ್ವಾಸ್ಥ್ಯ
ಹುಚ್ಚು ಹಿಡಿದು
ನಗ್ನನಾಗಿ ಸುತ್ತಿ ಅಲೆದು
ಯಾರಿಗೂ ಬೇಡವಾಗಿ
ಅರ್ಥವಿಲ್ಲದ ರಾಶಿ ಕಸ ಹೊತ್ತು
ಕಿರುಚಿ, ಕುಣಿದು, ನಕ್ಕು, ಅತ್ತು
ರಸ್ತೆಯ ಮೇಲೆ ಬಿದ್ದು
ಹೊರಳಿ, ಹೊರಳಿ, ಸಾಯಲಾರದೆ
ಕರ್ಮ ಕಳೆಯಲಾಗದೆ
ಕ್ರಿಮಿಯ ಬಾಳು ನಡೆಸಿ
‘ಜೀವನ್ಮರಣ’ ಪಡೆದವಗೆ
ಸಾವು…ಮೋಕ್ಷ.
ಸತ್ತು ಬದುಕಿದ!
*****
೧೪-೦೬-೧೯೯೨

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...