ಸಾವು

ಪ್ರಾಣ ಇದ್ದವು
ಅದನ್ನು
ಕಳೆದುಕೊಂಡಾಗ
ಸಂಭವಿಸುವುದು
ಸಾವು.
ಸೂಕ್ಷ್ಮಾತಿ ಸೂಕ್ಷ್ಮಜೀವಿ,
ಜಲಚರ, ಪಶು, ಪಕ್ಷಿ
ಸಕಲ ಸಸ್ಯ, ವೃಕ್ಷ
ದೈತ್ಯ ಕಾಯ ಎಲ್ಲಕೂ
ನಿಶ್ಚಿತ.. ಸಾವು.
‘ಜಾತಸ್ಯ ಮರಣಂ ಧೃವಂ’.

ಮಾನವನ ಮಾತೇ ಬೇರೆ.
ಅವನ ಅಂತ್ಯಕ್ಕೆ
ಬರಬೇಕಿಲ್ಲ ಮರಣ.
ಸ್ವಲ್ಪವೂ ಇಲ್ಲದಾಗ ಹಣ
ಆಸ್ತಿಪಾಸ್ತಿಯ ಜೊತೆಗೆ
ಮಾನ ಮರ್ಯಾದೆ
ಎಲ್ಲವೂ ಹರಾಜಾದಾಗ
ಸುಖದ ಸೌಧ ಕುಸಿದಾಗ
ಬಂತವನ ‘ಆರ್ಥಿಕ ಮರಣ’.
ಅವನಾಗ ಸಜೀವ ಶವ!

ಮಾನ ಉಳ್ಳವ ‘ಮಾನವ’
ಹೋದರವನ ಮಾನ
ಬಂತವನ ಮರಣ.

ಪರಸ್ಪರ ದ್ವೇಷ-ಅಸೂಯೆ
ಶೀತಲ ಯುದ್ಧ,
ಹೊಲಸು ರಾಜಕೀಯ –
ವಿಷ ವರ್ತುಲದಲ್ಲಿ
ಸಿಲುಕಿ, ತೇಜೋವಧೆ
ಗೊಂಡವನ ಸ್ಥಿತಿ
“ಬೌದ್ಧಿಕ ಮರಣ”.
ತಲೆ ಕೆಟ್ಟು, ಕಳೆದು
ಚಿತ್ತ ಸ್ವಾಸ್ಥ್ಯ
ಹುಚ್ಚು ಹಿಡಿದು
ನಗ್ನನಾಗಿ ಸುತ್ತಿ ಅಲೆದು
ಯಾರಿಗೂ ಬೇಡವಾಗಿ
ಅರ್ಥವಿಲ್ಲದ ರಾಶಿ ಕಸ ಹೊತ್ತು
ಕಿರುಚಿ, ಕುಣಿದು, ನಕ್ಕು, ಅತ್ತು
ರಸ್ತೆಯ ಮೇಲೆ ಬಿದ್ದು
ಹೊರಳಿ, ಹೊರಳಿ, ಸಾಯಲಾರದೆ
ಕರ್ಮ ಕಳೆಯಲಾಗದೆ
ಕ್ರಿಮಿಯ ಬಾಳು ನಡೆಸಿ
‘ಜೀವನ್ಮರಣ’ ಪಡೆದವಗೆ
ಸಾವು…ಮೋಕ್ಷ.
ಸತ್ತು ಬದುಕಿದ!
*****
೧೪-೦೬-೧೯೯೨

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವಿಗಳ ಕವಿ ಎಜ್ರಾ ಪೌಂಡ್
Next post ದೀಪ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…