Home / ಕವನ / ಕವಿತೆ / ಸಾವು

ಸಾವು

ಪ್ರಾಣ ಇದ್ದವು
ಅದನ್ನು
ಕಳೆದುಕೊಂಡಾಗ
ಸಂಭವಿಸುವುದು
ಸಾವು.
ಸೂಕ್ಷ್ಮಾತಿ ಸೂಕ್ಷ್ಮಜೀವಿ,
ಜಲಚರ, ಪಶು, ಪಕ್ಷಿ
ಸಕಲ ಸಸ್ಯ, ವೃಕ್ಷ
ದೈತ್ಯ ಕಾಯ ಎಲ್ಲಕೂ
ನಿಶ್ಚಿತ.. ಸಾವು.
‘ಜಾತಸ್ಯ ಮರಣಂ ಧೃವಂ’.

ಮಾನವನ ಮಾತೇ ಬೇರೆ.
ಅವನ ಅಂತ್ಯಕ್ಕೆ
ಬರಬೇಕಿಲ್ಲ ಮರಣ.
ಸ್ವಲ್ಪವೂ ಇಲ್ಲದಾಗ ಹಣ
ಆಸ್ತಿಪಾಸ್ತಿಯ ಜೊತೆಗೆ
ಮಾನ ಮರ್ಯಾದೆ
ಎಲ್ಲವೂ ಹರಾಜಾದಾಗ
ಸುಖದ ಸೌಧ ಕುಸಿದಾಗ
ಬಂತವನ ‘ಆರ್ಥಿಕ ಮರಣ’.
ಅವನಾಗ ಸಜೀವ ಶವ!

ಮಾನ ಉಳ್ಳವ ‘ಮಾನವ’
ಹೋದರವನ ಮಾನ
ಬಂತವನ ಮರಣ.

ಪರಸ್ಪರ ದ್ವೇಷ-ಅಸೂಯೆ
ಶೀತಲ ಯುದ್ಧ,
ಹೊಲಸು ರಾಜಕೀಯ –
ವಿಷ ವರ್ತುಲದಲ್ಲಿ
ಸಿಲುಕಿ, ತೇಜೋವಧೆ
ಗೊಂಡವನ ಸ್ಥಿತಿ
“ಬೌದ್ಧಿಕ ಮರಣ”.
ತಲೆ ಕೆಟ್ಟು, ಕಳೆದು
ಚಿತ್ತ ಸ್ವಾಸ್ಥ್ಯ
ಹುಚ್ಚು ಹಿಡಿದು
ನಗ್ನನಾಗಿ ಸುತ್ತಿ ಅಲೆದು
ಯಾರಿಗೂ ಬೇಡವಾಗಿ
ಅರ್ಥವಿಲ್ಲದ ರಾಶಿ ಕಸ ಹೊತ್ತು
ಕಿರುಚಿ, ಕುಣಿದು, ನಕ್ಕು, ಅತ್ತು
ರಸ್ತೆಯ ಮೇಲೆ ಬಿದ್ದು
ಹೊರಳಿ, ಹೊರಳಿ, ಸಾಯಲಾರದೆ
ಕರ್ಮ ಕಳೆಯಲಾಗದೆ
ಕ್ರಿಮಿಯ ಬಾಳು ನಡೆಸಿ
‘ಜೀವನ್ಮರಣ’ ಪಡೆದವಗೆ
ಸಾವು…ಮೋಕ್ಷ.
ಸತ್ತು ಬದುಕಿದ!
*****
೧೪-೦೬-೧೯೯೨

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...