Home / ಕವನ / ಕವಿತೆ / ಅಂಗರಕ್ಷಕ

ಅಂಗರಕ್ಷಕ

ರಾಜಮಹಾರಾಜರ, ಚಕ್ರವರ್ತಿ ಬಾದಶಹರ
ಜೀವ ಕಾಪಾಡಲು, ನೆರಳಂಬಂತೆ
ಹಿಂದಿದ್ದೆ, ಮುಂದಿದ್ದೆ, ಜೊತೆಗಿದ್ದೆ.
ಗೆಳೆಯನಾಗಿ, ಭಂಟನಾಗಿ, ಸಲಹೆಗಾರನಾಗಿ,
ಚರಣದಾಸನಾಗಿ ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದೆ.
ನನ್ನ ಜೀವ ತೆತ್ತು ಅವನ ಜೀವ ರಕ್ಷಿಸಿದ್ದೆ.
ನಾನಿಲ್ಲ ಅವನಿಲ್ಲ… ಆಗ,
ಅವನಿಲ್ಲ, ನಾನಿದ್ದೇನೆ… ಈಗ.

ಈಗ ನಾನು ಅಂಗರಕ್ಷಕನಲ್ಲ – ಬಾಡಿಗಾರ್ಡ್.
ದೇಶದ ಅಧ್ಯಕ್ಷರ, ಉಪಾಧ್ಯಕ್ಷರ ಮಂತ್ರಿಗಳ
ಹಿಂದೆ ಮಾತ್ರ ಇರುವೆ – ಜೊತೆಗಿಲ್ಲ.
ಕಟ್ಟುಮಸ್ತಾದ ಸಿಪಾಯಿ ನಾನು
ಶಿಸ್ತಾಗಿ ನಿಲ್ಲುವೆ ಸಮವಸ್ತ್ರ ಧರಿಸಿ.
ಕೆಲವೊಮ್ಮೆ ಮಫ್ತಿಯಲ್ಲಿ
ಎಲ್ಲೆಂದರಲ್ಲಿ ಹೇಗೆಂದರೆ ಹಾಗೆ.
ನನ್ನ ಮುಂದಿರುವ ರಾಜಕೀಯ ಪುಢಾರಿ
ಯಾರಿರಲಿ, ಹೇಗಿರಲಿ, ಏನು ಮಾಡುತ್ತಿರಲಿ
ಏನೇ ಮಾತಾಡುತ್ತಿರಲಿ, ಯಾರ ಜತೆಗಿರಲಿ
ಎಲ್ಲಾ ನೋಡುತ್ತಿದ್ದರೂ, ನಾ ಕುರುಡ
ಎಲ್ಲಾ ಕೇಳುತ್ತಿದ್ದರೂ, ನಾ ಕಿವುಡ
ಎಂದೂ ಏನೂ ಮಾತನಾಡದ ಮೂಗ.
ನನ್ನ ಮುಂದೆ ನಿಂತು ಸಹಸ್ರ ಸಹಸ್ರ
ಜನಸ್ತೋಮವನ್ನು ಮೋಡಿ ಮಾಡಿ
ನಗೆಗಡಲಲ್ಲಿ ಮುಳುಗಿಸಿ,
ಕರುಣೆಯಿಂದ ಕಂಬನಿ ಬರಿಸಿ,
ಬೇರೆಯವರ ಮೇಲೆ ಎತ್ತಿಕಟ್ಟಿ
ತನ್ನೆಡೆಗೆ ಸೆಳೆದುಕೊಳ್ಳುವ ಆಟ
ಎಲ್ಲ ನಾಟಕ ನೋಡುವುದೆನಗೆ ಕಾಟ!

ನಾನು ನಗುವುದಿಲ್ಲ, ಅಳುವುದಿಲ್ಲ.
ನಿರ್ಲಿಪ್ತರಲ್ಲಿ ನಿರ್ಲಿಪ್ತ. ನನಗೆ
ಎಲ್ಲ ಭಾಷೆ ಗೊತ್ತು, ಭಾವ ಗೊತ್ತು
ಎಲ್ಲರ ಕಥೆಗಳೂ ಚೆನ್ನಾಗಿ ಗೊತ್ತು
ಯಾರನ್ನು ಬೇಕಾದರೂ ಬ್ಲ್ಯಾಕ್‌ಮೈಲ್
ಮಾಡಬಲ್ಲೆ, ಮುಳುಗಿಸಲೂ ಬಲ್ಲೆ.
ಆದರೆ ನಾನು ಮಾತನಾಡುವಂತಿಲ್ಲ
ನಗುವಂತಿಲ್ಲ, ಅಳುವಂತಿಲ್ಲ!
ನಾನು ಕೇವಲ ನೆರಳು ಗೊಂಬೆ.
ನೀವೆಲ್ಲಾ ನನ್ನ ನೋಡುವಿರಿ ಪ್ರತಿ ದಿನ
ಟಿ.ವಿ.ಯಲ್ಲಿ, ಬಹಿರಂಗ ಸಭೆಯಲ್ಲಿ.
ನನ್ನ ಮುಖ ಚಿರಪರಿಚಿತ
ಆದರೆ ನಾನಾರಿಗೂ ಗೊತ್ತಿಲ್ಲ
ನನಗೊಂದು ಹೆಸರಿಲ್ಲ, ಬಾಳಿಲ್ಲ
ನಾನು ಒಬ್ಬ ಸರ್ಕಾರಿ ನೌಕರ
ಆದರೂ ನಾನು ಜೀತದ ಜೀವ.
ದೊಡ್ಡವರ ಹಿಂದಿದ್ದರೂ ನನಗಾವ
ಪ್ರಭಾವವಿಲ್ಲ. ಈಗಲೂ ನಾನು
ಜೀವಕ್ಕೆ ಜೀವ ಕೊಡುತ್ತೇನೆ
ನಾನು ಎಂದೆಂದಿಗೂ ಅಂಗರಕ್ಷಕ.
*****
೧೨-೦೬-೧೯೮೭

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...