Home / ಕವನ / ಕವಿತೆ / ಅಂಗರಕ್ಷಕ

ಅಂಗರಕ್ಷಕ

ರಾಜಮಹಾರಾಜರ, ಚಕ್ರವರ್ತಿ ಬಾದಶಹರ
ಜೀವ ಕಾಪಾಡಲು, ನೆರಳಂಬಂತೆ
ಹಿಂದಿದ್ದೆ, ಮುಂದಿದ್ದೆ, ಜೊತೆಗಿದ್ದೆ.
ಗೆಳೆಯನಾಗಿ, ಭಂಟನಾಗಿ, ಸಲಹೆಗಾರನಾಗಿ,
ಚರಣದಾಸನಾಗಿ ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದೆ.
ನನ್ನ ಜೀವ ತೆತ್ತು ಅವನ ಜೀವ ರಕ್ಷಿಸಿದ್ದೆ.
ನಾನಿಲ್ಲ ಅವನಿಲ್ಲ… ಆಗ,
ಅವನಿಲ್ಲ, ನಾನಿದ್ದೇನೆ… ಈಗ.

ಈಗ ನಾನು ಅಂಗರಕ್ಷಕನಲ್ಲ – ಬಾಡಿಗಾರ್ಡ್.
ದೇಶದ ಅಧ್ಯಕ್ಷರ, ಉಪಾಧ್ಯಕ್ಷರ ಮಂತ್ರಿಗಳ
ಹಿಂದೆ ಮಾತ್ರ ಇರುವೆ – ಜೊತೆಗಿಲ್ಲ.
ಕಟ್ಟುಮಸ್ತಾದ ಸಿಪಾಯಿ ನಾನು
ಶಿಸ್ತಾಗಿ ನಿಲ್ಲುವೆ ಸಮವಸ್ತ್ರ ಧರಿಸಿ.
ಕೆಲವೊಮ್ಮೆ ಮಫ್ತಿಯಲ್ಲಿ
ಎಲ್ಲೆಂದರಲ್ಲಿ ಹೇಗೆಂದರೆ ಹಾಗೆ.
ನನ್ನ ಮುಂದಿರುವ ರಾಜಕೀಯ ಪುಢಾರಿ
ಯಾರಿರಲಿ, ಹೇಗಿರಲಿ, ಏನು ಮಾಡುತ್ತಿರಲಿ
ಏನೇ ಮಾತಾಡುತ್ತಿರಲಿ, ಯಾರ ಜತೆಗಿರಲಿ
ಎಲ್ಲಾ ನೋಡುತ್ತಿದ್ದರೂ, ನಾ ಕುರುಡ
ಎಲ್ಲಾ ಕೇಳುತ್ತಿದ್ದರೂ, ನಾ ಕಿವುಡ
ಎಂದೂ ಏನೂ ಮಾತನಾಡದ ಮೂಗ.
ನನ್ನ ಮುಂದೆ ನಿಂತು ಸಹಸ್ರ ಸಹಸ್ರ
ಜನಸ್ತೋಮವನ್ನು ಮೋಡಿ ಮಾಡಿ
ನಗೆಗಡಲಲ್ಲಿ ಮುಳುಗಿಸಿ,
ಕರುಣೆಯಿಂದ ಕಂಬನಿ ಬರಿಸಿ,
ಬೇರೆಯವರ ಮೇಲೆ ಎತ್ತಿಕಟ್ಟಿ
ತನ್ನೆಡೆಗೆ ಸೆಳೆದುಕೊಳ್ಳುವ ಆಟ
ಎಲ್ಲ ನಾಟಕ ನೋಡುವುದೆನಗೆ ಕಾಟ!

ನಾನು ನಗುವುದಿಲ್ಲ, ಅಳುವುದಿಲ್ಲ.
ನಿರ್ಲಿಪ್ತರಲ್ಲಿ ನಿರ್ಲಿಪ್ತ. ನನಗೆ
ಎಲ್ಲ ಭಾಷೆ ಗೊತ್ತು, ಭಾವ ಗೊತ್ತು
ಎಲ್ಲರ ಕಥೆಗಳೂ ಚೆನ್ನಾಗಿ ಗೊತ್ತು
ಯಾರನ್ನು ಬೇಕಾದರೂ ಬ್ಲ್ಯಾಕ್‌ಮೈಲ್
ಮಾಡಬಲ್ಲೆ, ಮುಳುಗಿಸಲೂ ಬಲ್ಲೆ.
ಆದರೆ ನಾನು ಮಾತನಾಡುವಂತಿಲ್ಲ
ನಗುವಂತಿಲ್ಲ, ಅಳುವಂತಿಲ್ಲ!
ನಾನು ಕೇವಲ ನೆರಳು ಗೊಂಬೆ.
ನೀವೆಲ್ಲಾ ನನ್ನ ನೋಡುವಿರಿ ಪ್ರತಿ ದಿನ
ಟಿ.ವಿ.ಯಲ್ಲಿ, ಬಹಿರಂಗ ಸಭೆಯಲ್ಲಿ.
ನನ್ನ ಮುಖ ಚಿರಪರಿಚಿತ
ಆದರೆ ನಾನಾರಿಗೂ ಗೊತ್ತಿಲ್ಲ
ನನಗೊಂದು ಹೆಸರಿಲ್ಲ, ಬಾಳಿಲ್ಲ
ನಾನು ಒಬ್ಬ ಸರ್ಕಾರಿ ನೌಕರ
ಆದರೂ ನಾನು ಜೀತದ ಜೀವ.
ದೊಡ್ಡವರ ಹಿಂದಿದ್ದರೂ ನನಗಾವ
ಪ್ರಭಾವವಿಲ್ಲ. ಈಗಲೂ ನಾನು
ಜೀವಕ್ಕೆ ಜೀವ ಕೊಡುತ್ತೇನೆ
ನಾನು ಎಂದೆಂದಿಗೂ ಅಂಗರಕ್ಷಕ.
*****
೧೨-೦೬-೧೯೮೭

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...