ಅಂಗರಕ್ಷಕ

ರಾಜಮಹಾರಾಜರ, ಚಕ್ರವರ್ತಿ ಬಾದಶಹರ
ಜೀವ ಕಾಪಾಡಲು, ನೆರಳಂಬಂತೆ
ಹಿಂದಿದ್ದೆ, ಮುಂದಿದ್ದೆ, ಜೊತೆಗಿದ್ದೆ.
ಗೆಳೆಯನಾಗಿ, ಭಂಟನಾಗಿ, ಸಲಹೆಗಾರನಾಗಿ,
ಚರಣದಾಸನಾಗಿ ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದೆ.
ನನ್ನ ಜೀವ ತೆತ್ತು ಅವನ ಜೀವ ರಕ್ಷಿಸಿದ್ದೆ.
ನಾನಿಲ್ಲ ಅವನಿಲ್ಲ… ಆಗ,
ಅವನಿಲ್ಲ, ನಾನಿದ್ದೇನೆ… ಈಗ.

ಈಗ ನಾನು ಅಂಗರಕ್ಷಕನಲ್ಲ – ಬಾಡಿಗಾರ್ಡ್.
ದೇಶದ ಅಧ್ಯಕ್ಷರ, ಉಪಾಧ್ಯಕ್ಷರ ಮಂತ್ರಿಗಳ
ಹಿಂದೆ ಮಾತ್ರ ಇರುವೆ – ಜೊತೆಗಿಲ್ಲ.
ಕಟ್ಟುಮಸ್ತಾದ ಸಿಪಾಯಿ ನಾನು
ಶಿಸ್ತಾಗಿ ನಿಲ್ಲುವೆ ಸಮವಸ್ತ್ರ ಧರಿಸಿ.
ಕೆಲವೊಮ್ಮೆ ಮಫ್ತಿಯಲ್ಲಿ
ಎಲ್ಲೆಂದರಲ್ಲಿ ಹೇಗೆಂದರೆ ಹಾಗೆ.
ನನ್ನ ಮುಂದಿರುವ ರಾಜಕೀಯ ಪುಢಾರಿ
ಯಾರಿರಲಿ, ಹೇಗಿರಲಿ, ಏನು ಮಾಡುತ್ತಿರಲಿ
ಏನೇ ಮಾತಾಡುತ್ತಿರಲಿ, ಯಾರ ಜತೆಗಿರಲಿ
ಎಲ್ಲಾ ನೋಡುತ್ತಿದ್ದರೂ, ನಾ ಕುರುಡ
ಎಲ್ಲಾ ಕೇಳುತ್ತಿದ್ದರೂ, ನಾ ಕಿವುಡ
ಎಂದೂ ಏನೂ ಮಾತನಾಡದ ಮೂಗ.
ನನ್ನ ಮುಂದೆ ನಿಂತು ಸಹಸ್ರ ಸಹಸ್ರ
ಜನಸ್ತೋಮವನ್ನು ಮೋಡಿ ಮಾಡಿ
ನಗೆಗಡಲಲ್ಲಿ ಮುಳುಗಿಸಿ,
ಕರುಣೆಯಿಂದ ಕಂಬನಿ ಬರಿಸಿ,
ಬೇರೆಯವರ ಮೇಲೆ ಎತ್ತಿಕಟ್ಟಿ
ತನ್ನೆಡೆಗೆ ಸೆಳೆದುಕೊಳ್ಳುವ ಆಟ
ಎಲ್ಲ ನಾಟಕ ನೋಡುವುದೆನಗೆ ಕಾಟ!

ನಾನು ನಗುವುದಿಲ್ಲ, ಅಳುವುದಿಲ್ಲ.
ನಿರ್ಲಿಪ್ತರಲ್ಲಿ ನಿರ್ಲಿಪ್ತ. ನನಗೆ
ಎಲ್ಲ ಭಾಷೆ ಗೊತ್ತು, ಭಾವ ಗೊತ್ತು
ಎಲ್ಲರ ಕಥೆಗಳೂ ಚೆನ್ನಾಗಿ ಗೊತ್ತು
ಯಾರನ್ನು ಬೇಕಾದರೂ ಬ್ಲ್ಯಾಕ್‌ಮೈಲ್
ಮಾಡಬಲ್ಲೆ, ಮುಳುಗಿಸಲೂ ಬಲ್ಲೆ.
ಆದರೆ ನಾನು ಮಾತನಾಡುವಂತಿಲ್ಲ
ನಗುವಂತಿಲ್ಲ, ಅಳುವಂತಿಲ್ಲ!
ನಾನು ಕೇವಲ ನೆರಳು ಗೊಂಬೆ.
ನೀವೆಲ್ಲಾ ನನ್ನ ನೋಡುವಿರಿ ಪ್ರತಿ ದಿನ
ಟಿ.ವಿ.ಯಲ್ಲಿ, ಬಹಿರಂಗ ಸಭೆಯಲ್ಲಿ.
ನನ್ನ ಮುಖ ಚಿರಪರಿಚಿತ
ಆದರೆ ನಾನಾರಿಗೂ ಗೊತ್ತಿಲ್ಲ
ನನಗೊಂದು ಹೆಸರಿಲ್ಲ, ಬಾಳಿಲ್ಲ
ನಾನು ಒಬ್ಬ ಸರ್ಕಾರಿ ನೌಕರ
ಆದರೂ ನಾನು ಜೀತದ ಜೀವ.
ದೊಡ್ಡವರ ಹಿಂದಿದ್ದರೂ ನನಗಾವ
ಪ್ರಭಾವವಿಲ್ಲ. ಈಗಲೂ ನಾನು
ಜೀವಕ್ಕೆ ಜೀವ ಕೊಡುತ್ತೇನೆ
ನಾನು ಎಂದೆಂದಿಗೂ ಅಂಗರಕ್ಷಕ.
*****
೧೨-೦೬-೧೯೮೭

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ೨೦೦೯ರ ಲೋಕಸಭಾ ಚುನಾವಣೆಯ ಫಲಿತಾಂಶ : ಒಂದು ನೋಟ
Next post ಬತ್ತಿದ ಆಸೆ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

cheap jordans|wholesale air max|wholesale jordans|wholesale jewelry|wholesale jerseys