Home / ಕವನ / ಕವಿತೆ / ಅಂಗರಕ್ಷಕ

ಅಂಗರಕ್ಷಕ

ರಾಜಮಹಾರಾಜರ, ಚಕ್ರವರ್ತಿ ಬಾದಶಹರ
ಜೀವ ಕಾಪಾಡಲು, ನೆರಳಂಬಂತೆ
ಹಿಂದಿದ್ದೆ, ಮುಂದಿದ್ದೆ, ಜೊತೆಗಿದ್ದೆ.
ಗೆಳೆಯನಾಗಿ, ಭಂಟನಾಗಿ, ಸಲಹೆಗಾರನಾಗಿ,
ಚರಣದಾಸನಾಗಿ ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದೆ.
ನನ್ನ ಜೀವ ತೆತ್ತು ಅವನ ಜೀವ ರಕ್ಷಿಸಿದ್ದೆ.
ನಾನಿಲ್ಲ ಅವನಿಲ್ಲ… ಆಗ,
ಅವನಿಲ್ಲ, ನಾನಿದ್ದೇನೆ… ಈಗ.

ಈಗ ನಾನು ಅಂಗರಕ್ಷಕನಲ್ಲ – ಬಾಡಿಗಾರ್ಡ್.
ದೇಶದ ಅಧ್ಯಕ್ಷರ, ಉಪಾಧ್ಯಕ್ಷರ ಮಂತ್ರಿಗಳ
ಹಿಂದೆ ಮಾತ್ರ ಇರುವೆ – ಜೊತೆಗಿಲ್ಲ.
ಕಟ್ಟುಮಸ್ತಾದ ಸಿಪಾಯಿ ನಾನು
ಶಿಸ್ತಾಗಿ ನಿಲ್ಲುವೆ ಸಮವಸ್ತ್ರ ಧರಿಸಿ.
ಕೆಲವೊಮ್ಮೆ ಮಫ್ತಿಯಲ್ಲಿ
ಎಲ್ಲೆಂದರಲ್ಲಿ ಹೇಗೆಂದರೆ ಹಾಗೆ.
ನನ್ನ ಮುಂದಿರುವ ರಾಜಕೀಯ ಪುಢಾರಿ
ಯಾರಿರಲಿ, ಹೇಗಿರಲಿ, ಏನು ಮಾಡುತ್ತಿರಲಿ
ಏನೇ ಮಾತಾಡುತ್ತಿರಲಿ, ಯಾರ ಜತೆಗಿರಲಿ
ಎಲ್ಲಾ ನೋಡುತ್ತಿದ್ದರೂ, ನಾ ಕುರುಡ
ಎಲ್ಲಾ ಕೇಳುತ್ತಿದ್ದರೂ, ನಾ ಕಿವುಡ
ಎಂದೂ ಏನೂ ಮಾತನಾಡದ ಮೂಗ.
ನನ್ನ ಮುಂದೆ ನಿಂತು ಸಹಸ್ರ ಸಹಸ್ರ
ಜನಸ್ತೋಮವನ್ನು ಮೋಡಿ ಮಾಡಿ
ನಗೆಗಡಲಲ್ಲಿ ಮುಳುಗಿಸಿ,
ಕರುಣೆಯಿಂದ ಕಂಬನಿ ಬರಿಸಿ,
ಬೇರೆಯವರ ಮೇಲೆ ಎತ್ತಿಕಟ್ಟಿ
ತನ್ನೆಡೆಗೆ ಸೆಳೆದುಕೊಳ್ಳುವ ಆಟ
ಎಲ್ಲ ನಾಟಕ ನೋಡುವುದೆನಗೆ ಕಾಟ!

ನಾನು ನಗುವುದಿಲ್ಲ, ಅಳುವುದಿಲ್ಲ.
ನಿರ್ಲಿಪ್ತರಲ್ಲಿ ನಿರ್ಲಿಪ್ತ. ನನಗೆ
ಎಲ್ಲ ಭಾಷೆ ಗೊತ್ತು, ಭಾವ ಗೊತ್ತು
ಎಲ್ಲರ ಕಥೆಗಳೂ ಚೆನ್ನಾಗಿ ಗೊತ್ತು
ಯಾರನ್ನು ಬೇಕಾದರೂ ಬ್ಲ್ಯಾಕ್‌ಮೈಲ್
ಮಾಡಬಲ್ಲೆ, ಮುಳುಗಿಸಲೂ ಬಲ್ಲೆ.
ಆದರೆ ನಾನು ಮಾತನಾಡುವಂತಿಲ್ಲ
ನಗುವಂತಿಲ್ಲ, ಅಳುವಂತಿಲ್ಲ!
ನಾನು ಕೇವಲ ನೆರಳು ಗೊಂಬೆ.
ನೀವೆಲ್ಲಾ ನನ್ನ ನೋಡುವಿರಿ ಪ್ರತಿ ದಿನ
ಟಿ.ವಿ.ಯಲ್ಲಿ, ಬಹಿರಂಗ ಸಭೆಯಲ್ಲಿ.
ನನ್ನ ಮುಖ ಚಿರಪರಿಚಿತ
ಆದರೆ ನಾನಾರಿಗೂ ಗೊತ್ತಿಲ್ಲ
ನನಗೊಂದು ಹೆಸರಿಲ್ಲ, ಬಾಳಿಲ್ಲ
ನಾನು ಒಬ್ಬ ಸರ್ಕಾರಿ ನೌಕರ
ಆದರೂ ನಾನು ಜೀತದ ಜೀವ.
ದೊಡ್ಡವರ ಹಿಂದಿದ್ದರೂ ನನಗಾವ
ಪ್ರಭಾವವಿಲ್ಲ. ಈಗಲೂ ನಾನು
ಜೀವಕ್ಕೆ ಜೀವ ಕೊಡುತ್ತೇನೆ
ನಾನು ಎಂದೆಂದಿಗೂ ಅಂಗರಕ್ಷಕ.
*****
೧೨-೦೬-೧೯೮೭

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...