ತಂಗಾಳಿ

ತಂಗಾಳಿ… ಬೀಸುತಲಿ
ಮೈ…ಮನ ಅರಳುತ
ತೇಲಿ… ಬರುತಿಹದು
ನಿನ್ನ…ಮಧುರ ನೆನಪು
ಬಾನಂಗಳದಿ ಬಯಕೆ
ಬೇಡುತಿಹ ಸಂಗವು

ಕರಾಳ ರಾತ್ರಿಯಾಗಿ
ಏಕಾಂಗಿತನದ ನೋವು
ಗಾಯಗೊಳಿಸುತಲಿ…
ತರುತಿಹದು ಸವಿನೆನಪು
ಮನವೆಲ್ಲಾ ಅರಳಿಸಿಹದು

ಬಿರುಗಾಳಿಯ ರಭಸದಿ
ಸಿಲುಕಿದ ಮರದಂತೆ
ಒಡನಾಟದ ಕನಸು…
ತೂರಿ-ಬರುತಲಿ
ತನು ಮನ ಜರಿದು
ದಾಹದಿ ತೂರಾಡುತ
ಬೇಯುತ ಬಳಲುತಿಹದು

ಅಗಲಿಕೆಯ ಬೇಗುದಿಯು
ಬೇಸರದಿ ಮುದುಡಿ
ಕಾಯುವ ಕೋಗಿಲೆಯಂತೆ
ವಸಂತ ನೋಡುತಲಿ
ಚಾತಕ-ಪಕ್ಷಿಯಾಗಿ…

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಸುಗೆ-ವಸುಗೆ
Next post ಅಕ್ಷಯ ಪಾತ್ರೆ

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…