ತಪ್ಪಲ್ಲವೆ?

ರಾಮ ಬೇರೆಯಲ್ಲ
ಕೃಷ್ಣ ಬೇರೆಯಲ್ಲ
ಅಷ್ಟರಮಟ್ಟಿಗೆ ಗಾಢ
ಅವರಿಬ್ಬರ ಮೈತ್ರಿ
ರಾಮನಿಗಿಂತ ಕೃಷ್ಣನೇ
ಎಲ್ಲರಿಗೂ ಅಚ್ಚುಮೆಚ್ಚು.
ಎರಡು ದೇಹ ಒಂದೇ ಜೀವ
ಎಂಬಂತೆ ಬೆಳೆದು…
ಬೆಳೆದು ಬೆಳೆದು ದೊಡ್ಡವರಾದರು.
ಮದುವೆ, ಮಕ್ಕಳು ಎಲ್ಲಾ ಆಯಿತು.
ರಾಮನ ಮಕ್ಕಳನ್ನು ಮುದ್ದಿಸುತ್ತಾ
ಕೃಷ್ಣ ಹೇಳಿದ:
ರಾಮ, ನಾ ಬೇರೆ ಅಲ್ಲ, ನೀ ಬೇರೆ ಅಲ್ಲ
ನಿನ್ನ ತಂದೆ ತಾಯಿ ನನಗೂ
ಪ್ರೀತಿಯ, ಆತ್ಮೀಯ ಮಾತಾಪಿತರು.
ನಿನ್ನಣ್ಣ ತಮ್ಮಂದಿರು, ಅಕ್ಕ ತಂಗಿಯರು
ನನಗೂ ಅಷ್ಟೇ.
ನಿನ್ನ ಮಕ್ಕಳು ನೋಡು
ನನ್ನ ಎಷ್ಟು ಹಚ್ಚಿಕೊಂಡಿವೆ!
ನಿಜ ಹೇಳಬೇಕೆಂದರೆ,
ನಾನೇ ನೀನು, ನೀನೇ ನಾನು.
ನಿನ್ನ ತಾಯಿ ನನಗೂ ತಾಯಿ,
ನಿನ್ನ ತಂದೆ ನನಗೂ ತಂದೆ.
ನಿನ್ನ ಹೆಂಡತಿ….
ರಾಮ ಕೃಷ್ಣನ ಕೆನ್ನೆಗೆ ಬಾರಿಸಿದ!
ತಪ್ಪಲ್ಲವೇ?
*****
೧೪-೦೭-೧೯೯೦

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಕ್ಕಳಿಗೆ ಎಂಥಾ ಕತೆಗಳು ಬೇಕು?
Next post ಆತ್ಮ ಜ್ಯೋತಿ

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಜಂಬದ ಕೋಳಿ

    ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್‍ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್‍ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…