Home / ಕವನ / ಕವಿತೆ / ಸತ್ತವನ ಮನೆಯಲ್ಲಿ

ಸತ್ತವನ ಮನೆಯಲ್ಲಿ

ಸತ್ತವನ ಮನೆಯಲ್ಲಿ ಸಂಜೆ
ಅವರಿವರು ತಂದಿಟ್ಟ
ಬಗೆ ಬಗೆಯ ಊಟ
ಅವರಿವರು ತಂದಿಟ್ಟ
ಹಲವು ಹತ್ತು ಸಮಸ್ಯೆ.
ಸಂತಾಪಕೆ ಬಂದವರ
ಮಾತು ನಗೆ ಕೇಕೆ
ಸರಸ ಸಂಭಾಷಣೆ!
ನವ ವಿಧವೆ ಸೊಂಟದಲ್ಲಿ
ಬೀಗದ ಕೈಗೊಂಚಲು ಭದ್ರ.
ಮಗ ಮಗಳು ಸೊಸೆ ಅಳಿಯ
ಎಲ್ಲರದೂ ಒಂದೇ ಚಿಂತೆ
ಚಿತೆ ಏರಿದವನ ಅಸ್ತಿ
ಲಪಟಾಯಿಸುವ ಸಂಚು.
ಗೃಹ ಕಲಹ, ಶೀತಲ ಯುದ್ಧ
ಎಲ್ಲ ಈಗಲೇ ಆಗಬೇಕು
ಬಿಸಿ ಆರುವ ಮುನ್ನ
ತಟ್ಟಿದರೆ ತಾನೆ ಕಬ್ಬಿಣ ಮೆದು.
ಸಾಲ ಕೊಡದವರೂ ಬಂದರು ವಸೂಲಿಗೆ.
ಆಫೀಸಿನಿಂದ ಬಂತು ವಂತಿಗೆ
ಮರಣೋತ್ತರ ನಿಧಿ
ಗ್ರಾಚ್ಯುಟಿ ಜತೆಗೆ ಭವಿಷ್ಯ ನಿಧಿ.
ನಿಧಿ ಕಂಡು ಎಲ್ಲರ ಮುಖ
ಅರಳಿತು – ಮರೆಯಿತು ದುಃಖ
ಅಳುವರಾರಿಲ್ಲ ಇಲ್ಲಿ
ಆಸಯೊಂದೇ ತುಂಬಿತ್ತು,
ಎಲ್ಲರ ಕಣ್ಣುಗಳಲ್ಲಿ.
ಸತ್ತವನ ಫೋಟೋ ಬಂತು
ಹೂವಿನ ಹಾರ, ಊದುಬತ್ತಿ
ಪುರೋಹಿತರ ಮಂತ್ರ-ತಂತ್ರ
ಎಲ್ಲ ಸಾಂಗೋಪಾಂಗ
ಸತ್ತವ ಮೇಲಿಂದ ನೋಡಿ ನೊಂದ
ಯಾರಿಗೂ ಬೇಡವಾದ ನಾನು
ಈ ಸುಖಕ್ಕೆ ಸಾಯಬೇಕಿತ್ತೇನು?
*****
೩೧-೦೫-೧೯೯೩

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...