ಸತ್ತವನ ಮನೆಯಲ್ಲಿ ಸಂಜೆ
ಅವರಿವರು ತಂದಿಟ್ಟ
ಬಗೆ ಬಗೆಯ ಊಟ
ಅವರಿವರು ತಂದಿಟ್ಟ
ಹಲವು ಹತ್ತು ಸಮಸ್ಯೆ.
ಸಂತಾಪಕೆ ಬಂದವರ
ಮಾತು ನಗೆ ಕೇಕೆ
ಸರಸ ಸಂಭಾಷಣೆ!
ನವ ವಿಧವೆ ಸೊಂಟದಲ್ಲಿ
ಬೀಗದ ಕೈಗೊಂಚಲು ಭದ್ರ.
ಮಗ ಮಗಳು ಸೊಸೆ ಅಳಿಯ
ಎಲ್ಲರದೂ ಒಂದೇ ಚಿಂತೆ
ಚಿತೆ ಏರಿದವನ ಅಸ್ತಿ
ಲಪಟಾಯಿಸುವ ಸಂಚು.
ಗೃಹ ಕಲಹ, ಶೀತಲ ಯುದ್ಧ
ಎಲ್ಲ ಈಗಲೇ ಆಗಬೇಕು
ಬಿಸಿ ಆರುವ ಮುನ್ನ
ತಟ್ಟಿದರೆ ತಾನೆ ಕಬ್ಬಿಣ ಮೆದು.
ಸಾಲ ಕೊಡದವರೂ ಬಂದರು ವಸೂಲಿಗೆ.
ಆಫೀಸಿನಿಂದ ಬಂತು ವಂತಿಗೆ
ಮರಣೋತ್ತರ ನಿಧಿ
ಗ್ರಾಚ್ಯುಟಿ ಜತೆಗೆ ಭವಿಷ್ಯ ನಿಧಿ.
ನಿಧಿ ಕಂಡು ಎಲ್ಲರ ಮುಖ
ಅರಳಿತು – ಮರೆಯಿತು ದುಃಖ
ಅಳುವರಾರಿಲ್ಲ ಇಲ್ಲಿ
ಆಸಯೊಂದೇ ತುಂಬಿತ್ತು,
ಎಲ್ಲರ ಕಣ್ಣುಗಳಲ್ಲಿ.
ಸತ್ತವನ ಫೋಟೋ ಬಂತು
ಹೂವಿನ ಹಾರ, ಊದುಬತ್ತಿ
ಪುರೋಹಿತರ ಮಂತ್ರ-ತಂತ್ರ
ಎಲ್ಲ ಸಾಂಗೋಪಾಂಗ
ಸತ್ತವ ಮೇಲಿಂದ ನೋಡಿ ನೊಂದ
ಯಾರಿಗೂ ಬೇಡವಾದ ನಾನು
ಈ ಸುಖಕ್ಕೆ ಸಾಯಬೇಕಿತ್ತೇನು?
*****
೩೧-೦೫-೧೯೯೩
Related Post
ಸಣ್ಣ ಕತೆ
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…