ಮಾನಾಪಮಾನ ನಿನ್ನವಮ್ಮಾ

 

ಮಾನಾಪಮಾನ ನಿನ್ನವಮ್ಮಾ ಎನಗೇನು
ಶ್ವಾನನಂತೆ ಬೊಗಳುತಿಹರು ಹೀನ ಜನರೆಲ್ಲರಿವರು ||ಪ||

ಸದಾ ನಿನ್ನ ಧ್ಯಾನದೊಳಿರಲು
ಮದಾ ಬಂದಿತೆಂಬುವರಿವರು
ಕದನವ ಮಾಡುವರಿವರು
ನಿಧಾನವ ತಿಳಿಯದೆಯವರು
ಇದು ನಿನ್ನ ಮನಸ್ಸಿಗೆ
ಮೃದುವಾದರೊಳಿತಮ್ಮಾ ||೧||

ನಿನ್ನ ಚಿಂತೆಯೊಳಿರಲು
ಖಿನ್ನ ಪಡಿಸುವರೆನ್ನ ಖೂಳರು
ಸಣ್ಣ ಮಾತನಾಡುವವರು
ಸೊನ್ನಿ ಸೂಕ್ಷ್ಮವನರಿಯದವರು
ಎನಗೇನು ಕುಂದುವದು
ನಿನಗದು ಹೊಂದುವದು ||೨||

ನಿಜಾನಂದ ಬೋಧ ಎನಗೆ
ಕುಜನರ ನಿಂದೆ ನಿನಗೆ
ಸುಜನರ ರಕ್ಷೆಯೊಳಗೆ
ಗಜಿಬಿಜಿ ಬರುವದು ನಿನಗೆ
ಭಜಿಸುವೆ ಗುಡಿಪುರೇಶನ
ನಿಜ ವಿಷಯ ನಾಯಕಿ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತರವಲ್ಲ ತಂಗಿ ನಿನ್ನ ತಂಬೂರಿ
Next post ಪಾಹಿ ಪರಬ್ರಹ್ಮಣಿ ತ್ರಾಣಿ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…