ಮಾನಾಪಮಾನ ನಿನ್ನವಮ್ಮಾ

 

ಮಾನಾಪಮಾನ ನಿನ್ನವಮ್ಮಾ ಎನಗೇನು
ಶ್ವಾನನಂತೆ ಬೊಗಳುತಿಹರು ಹೀನ ಜನರೆಲ್ಲರಿವರು ||ಪ||

ಸದಾ ನಿನ್ನ ಧ್ಯಾನದೊಳಿರಲು
ಮದಾ ಬಂದಿತೆಂಬುವರಿವರು
ಕದನವ ಮಾಡುವರಿವರು
ನಿಧಾನವ ತಿಳಿಯದೆಯವರು
ಇದು ನಿನ್ನ ಮನಸ್ಸಿಗೆ
ಮೃದುವಾದರೊಳಿತಮ್ಮಾ ||೧||

ನಿನ್ನ ಚಿಂತೆಯೊಳಿರಲು
ಖಿನ್ನ ಪಡಿಸುವರೆನ್ನ ಖೂಳರು
ಸಣ್ಣ ಮಾತನಾಡುವವರು
ಸೊನ್ನಿ ಸೂಕ್ಷ್ಮವನರಿಯದವರು
ಎನಗೇನು ಕುಂದುವದು
ನಿನಗದು ಹೊಂದುವದು ||೨||

ನಿಜಾನಂದ ಬೋಧ ಎನಗೆ
ಕುಜನರ ನಿಂದೆ ನಿನಗೆ
ಸುಜನರ ರಕ್ಷೆಯೊಳಗೆ
ಗಜಿಬಿಜಿ ಬರುವದು ನಿನಗೆ
ಭಜಿಸುವೆ ಗುಡಿಪುರೇಶನ
ನಿಜ ವಿಷಯ ನಾಯಕಿ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತರವಲ್ಲ ತಂಗಿ ನಿನ್ನ ತಂಬೂರಿ
Next post ಪಾಹಿ ಪರಬ್ರಹ್ಮಣಿ ತ್ರಾಣಿ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…