ಇಂದು,
ನೀ ಬರೆದ ಪತ್ರವದು
ಬಂದು ತಲುಪಿತು ಇಂದು
ಸಂತಸದ ನೆನಪನ್ನು
ಅಗಲಿಕೆಯ ಅಳಲನ್ನು
ತುಂಬಿ ತಂದಿತು ಇಂದು.
ವಿದ್ಯೆಗೆ ಬುದ್ಧಿಗೆ ಪುರಸ್ಕಾರ
ಕೊಟ್ಟ ಬ್ಯಾಂಕಿಗೆ ನಮಸ್ಕಾರ
ಎಂದು ಹೇಳುತ್ತಾ ನಾನು, ಒಳ ಬಂದೆನಂದು
ಅಕ್ಟೋಬರ್ ತಿಂಗಳ ಹದಿನೆಂಟರಂದು.
ತವರೂರ ತೊರೆದು ಬಹು ದೂರ ಬಂದಿಹೆನು
ದೂರದ ಸುರಪುರದಲ್ಲಿ ಹೊಸ ಬಾಳ ಕಂಡಿಹೆನು.
ಎಲ್ಲೆಡೆ ಹರಡಿಹುದಿಲ್ಲಿ ಬರಡುಗಿರಿ ಪಂಕ್ತಿಗಳು
ಊರ ಚರಿತೆಯ ಸಾರುವ ಭಗ್ನಾವಶೇಷಗಳು.
ಹಸುರಿಲ್ಲ, ಚಿಗುರಿಲ್ಲ, ಹರಿವ ನೀರಿಲ್ಲ
ನನಗಾಗಿ ಮಿಡಿವ ಮನವಿಲ್ಲವಲ್ಲ
ಎಂದು ನೊಂದೆ ನಾನು ದುಃಖದಿಂದ
ಎನ್ನಧಿಕಾರಿ ಕರೆದರೆನ್ನನು ಸ್ನೇಹದಿಂದ.
ದಿಬ್ಬದ ಮೇಲಿನ ಮಹಲಿನ ಮಹಡಿಯಲಿ
ನೋವು ನಲಿವಿಲ್ಲದ ಮೌನದರಮನೆಯಲ್ಲಿ
ಸುಸಜ್ಜಿತ ಕೋಣೆಯಲಿ ಈಗೆನ್ನ ವಾಸ
ಬ್ಯಾಂಕಿನ ಹೊಸ ಶಾಖೆಯಲ್ಲಿ ಈಗೆನ್ನ ಕೆಲಸ.
ಮಾತೆಯ ಮಮತೆಯ ಸಿಹಿಯೂಟ ಈಗಿಲ್ಲ,
ಖಾನಾವಳಿಯ ಖಾರದ ಊಟವೇ ಈಗೆಲ್ಲ!
ಸಾಗುತಿದೆ ಬಾಳು ಹೊಸ ಹಾದಿ ಹಿಡಿದು
ಮಿಡಿಯುತಿದೆ ಮನವು ನನ್ನವರ ನೆನೆದು.
*****
೨೪-೧೧-೧೯೭೯
Related Post
ಸಣ್ಣ ಕತೆ
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…