Home / ಕವನ / ಕವಿತೆ / ಹಡಗು

ಹಡಗು

ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ
ದೂರದಿಂದ ನೋಡಿ
ಅದರ ಸೌಂದರ್ಯ,
ತಿಳಿಯದೆ ಅಂತರ್ಯ,
ಸ್ಥಳ ಗಿಟ್ಟಿಸಲು ಹೋದವರು,
ಹೋಗಲು ಹಂಬಲಿಸಿದವರು
ಇದ್ದಾರು ಅಸಂಖ್ಯ ಜನರು.
ಒಳ ಹೊಕ್ಕು ಕುಳಿತವರಿಗೇ ಗೊತ್ತು
ಅಲ್ಲಿನ ವಿಶಿಷ್ಟ ಜಗತ್ತು
ನಿಂತ ನೆಲವೇ ಭದ್ರವಿಲ್ಲ
ಸದಾ ಕುಲುಕು ನಡಿಗೆ
ಹೊರಟಾಗಿದೆ. ಹಿಂತಿರುಗುವಂತಿಲ್ಲ,
ಮಧ್ಯೆ ಇಳಿಯುವ ಮಾತೇ ಇಲ್ಲ!
ತೇಲುತ್ತಿರುವ ಜಲವೇ ಉಕ್ಕಿ
ತನ್ನ ಒಡಲಲ್ಲಿ ಸೇರಿಸಿ
ಹೆಸರಿಲ್ಲದಂತೆ ಮಾಡೀತು.
ಅನಿರೀಕ್ಷಿತ ಬಂದ ತಿಮಿಂಗಿಲ
ಬುಡಮೇಲು ಮಾಡೀತು
ಕಡಲಗಳ್ಳರ ಕಾಟ ಒಂದೆಡೆ,
ಬಿರುಗಾಳಿಯ ಭೀತಿ ಮತ್ತೊಂದೆಡೆ.
ಶೇಖರಿಸಿರುವ ಊಟ, ನೀರು
ಮುಗಿಯುವ ಮುನ್ನ ಒಂದೂರು
ಸೇರುವ ನೆಲೆಸುವ ಆಸೆ ನೂರು
ಸೇರಿದರೆ ಸೇರೇವು,
ಕರೆ ಬಂದರೆ ಮತ್ತೆ ಹೊರಟೆವು
ದೀರ್ಘ ಪಯಣ ತಂದ ನಂಟು
ತಿಳಿಯದೆ ಹಾಕಿಕೊಂಡ ಗಂಟು
ತಂದೀತು ಅನಿಶ್ಚಿತತೆಯಲ್ಲೆ
ನಿಶ್ಚಿತ ಬಾಳಿನ ಲಂಗರು.
ನಮ್ಮಹಡಗು ಬ್ಯಾಂಕು
ಬಾಳು ದೀರ್ಘ ಪಯಣ
ಕೊನೆ ಮೊದಲಿಲ್ಲದ ವರ್ಗಗಳು
ಆಂತರಿಕ ಬಾಹ್ಯ ಒತ್ತಡಗಳು
ರಾಜಕೀಯ ವಶೀಲಿಗಳು
ದಿನ ನಿತ್ಯದ ನೂರೆಂಟು ಸಮಸ್ಯೆಗಳು
ಹುಟ್ಟೂರು ಬಿಟ್ಟು, ಕಳೆದು ದಶಕಗಳು
ಊರಿಂದೂರಿಗೆ ವಲಸೆ ಹೋದಲ್ಲಿ –
ಎಲ್ಲಿಯೋ ಮದುವೆಯಾಗಿ
ಬೇರೆಲ್ಲಿಯೋ ಮನೆ ಕಟ್ಟಿ
ದೇವರ ದಯೆಯಿಂದ,
ದೊಡ್ಡವರ ಆಶೀರ್ವಾದದಿಂದ
ಮರ್ಯಾದೆಯಾಗಿ ರಿಟೈರಾದರೆ
ಏಳೇಳು ಜನ್ಮಗಳ ಪುಣ್ಯ.
ನಿಜಕ್ಕೂ..ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ.
*****
೧೧-೦೬-೧೯೯೨

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...