Home / ಕವನ / ಕವಿತೆ / ಹಡಗು

ಹಡಗು

ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ
ದೂರದಿಂದ ನೋಡಿ
ಅದರ ಸೌಂದರ್ಯ,
ತಿಳಿಯದೆ ಅಂತರ್ಯ,
ಸ್ಥಳ ಗಿಟ್ಟಿಸಲು ಹೋದವರು,
ಹೋಗಲು ಹಂಬಲಿಸಿದವರು
ಇದ್ದಾರು ಅಸಂಖ್ಯ ಜನರು.
ಒಳ ಹೊಕ್ಕು ಕುಳಿತವರಿಗೇ ಗೊತ್ತು
ಅಲ್ಲಿನ ವಿಶಿಷ್ಟ ಜಗತ್ತು
ನಿಂತ ನೆಲವೇ ಭದ್ರವಿಲ್ಲ
ಸದಾ ಕುಲುಕು ನಡಿಗೆ
ಹೊರಟಾಗಿದೆ. ಹಿಂತಿರುಗುವಂತಿಲ್ಲ,
ಮಧ್ಯೆ ಇಳಿಯುವ ಮಾತೇ ಇಲ್ಲ!
ತೇಲುತ್ತಿರುವ ಜಲವೇ ಉಕ್ಕಿ
ತನ್ನ ಒಡಲಲ್ಲಿ ಸೇರಿಸಿ
ಹೆಸರಿಲ್ಲದಂತೆ ಮಾಡೀತು.
ಅನಿರೀಕ್ಷಿತ ಬಂದ ತಿಮಿಂಗಿಲ
ಬುಡಮೇಲು ಮಾಡೀತು
ಕಡಲಗಳ್ಳರ ಕಾಟ ಒಂದೆಡೆ,
ಬಿರುಗಾಳಿಯ ಭೀತಿ ಮತ್ತೊಂದೆಡೆ.
ಶೇಖರಿಸಿರುವ ಊಟ, ನೀರು
ಮುಗಿಯುವ ಮುನ್ನ ಒಂದೂರು
ಸೇರುವ ನೆಲೆಸುವ ಆಸೆ ನೂರು
ಸೇರಿದರೆ ಸೇರೇವು,
ಕರೆ ಬಂದರೆ ಮತ್ತೆ ಹೊರಟೆವು
ದೀರ್ಘ ಪಯಣ ತಂದ ನಂಟು
ತಿಳಿಯದೆ ಹಾಕಿಕೊಂಡ ಗಂಟು
ತಂದೀತು ಅನಿಶ್ಚಿತತೆಯಲ್ಲೆ
ನಿಶ್ಚಿತ ಬಾಳಿನ ಲಂಗರು.
ನಮ್ಮಹಡಗು ಬ್ಯಾಂಕು
ಬಾಳು ದೀರ್ಘ ಪಯಣ
ಕೊನೆ ಮೊದಲಿಲ್ಲದ ವರ್ಗಗಳು
ಆಂತರಿಕ ಬಾಹ್ಯ ಒತ್ತಡಗಳು
ರಾಜಕೀಯ ವಶೀಲಿಗಳು
ದಿನ ನಿತ್ಯದ ನೂರೆಂಟು ಸಮಸ್ಯೆಗಳು
ಹುಟ್ಟೂರು ಬಿಟ್ಟು, ಕಳೆದು ದಶಕಗಳು
ಊರಿಂದೂರಿಗೆ ವಲಸೆ ಹೋದಲ್ಲಿ –
ಎಲ್ಲಿಯೋ ಮದುವೆಯಾಗಿ
ಬೇರೆಲ್ಲಿಯೋ ಮನೆ ಕಟ್ಟಿ
ದೇವರ ದಯೆಯಿಂದ,
ದೊಡ್ಡವರ ಆಶೀರ್ವಾದದಿಂದ
ಮರ್ಯಾದೆಯಾಗಿ ರಿಟೈರಾದರೆ
ಏಳೇಳು ಜನ್ಮಗಳ ಪುಣ್ಯ.
ನಿಜಕ್ಕೂ..ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ.
*****
೧೧-೦೬-೧೯೯೨

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...