Home / ಕವನ / ಕವಿತೆ / ಹಡಗು

ಹಡಗು

ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ
ದೂರದಿಂದ ನೋಡಿ
ಅದರ ಸೌಂದರ್ಯ,
ತಿಳಿಯದೆ ಅಂತರ್ಯ,
ಸ್ಥಳ ಗಿಟ್ಟಿಸಲು ಹೋದವರು,
ಹೋಗಲು ಹಂಬಲಿಸಿದವರು
ಇದ್ದಾರು ಅಸಂಖ್ಯ ಜನರು.
ಒಳ ಹೊಕ್ಕು ಕುಳಿತವರಿಗೇ ಗೊತ್ತು
ಅಲ್ಲಿನ ವಿಶಿಷ್ಟ ಜಗತ್ತು
ನಿಂತ ನೆಲವೇ ಭದ್ರವಿಲ್ಲ
ಸದಾ ಕುಲುಕು ನಡಿಗೆ
ಹೊರಟಾಗಿದೆ. ಹಿಂತಿರುಗುವಂತಿಲ್ಲ,
ಮಧ್ಯೆ ಇಳಿಯುವ ಮಾತೇ ಇಲ್ಲ!
ತೇಲುತ್ತಿರುವ ಜಲವೇ ಉಕ್ಕಿ
ತನ್ನ ಒಡಲಲ್ಲಿ ಸೇರಿಸಿ
ಹೆಸರಿಲ್ಲದಂತೆ ಮಾಡೀತು.
ಅನಿರೀಕ್ಷಿತ ಬಂದ ತಿಮಿಂಗಿಲ
ಬುಡಮೇಲು ಮಾಡೀತು
ಕಡಲಗಳ್ಳರ ಕಾಟ ಒಂದೆಡೆ,
ಬಿರುಗಾಳಿಯ ಭೀತಿ ಮತ್ತೊಂದೆಡೆ.
ಶೇಖರಿಸಿರುವ ಊಟ, ನೀರು
ಮುಗಿಯುವ ಮುನ್ನ ಒಂದೂರು
ಸೇರುವ ನೆಲೆಸುವ ಆಸೆ ನೂರು
ಸೇರಿದರೆ ಸೇರೇವು,
ಕರೆ ಬಂದರೆ ಮತ್ತೆ ಹೊರಟೆವು
ದೀರ್ಘ ಪಯಣ ತಂದ ನಂಟು
ತಿಳಿಯದೆ ಹಾಕಿಕೊಂಡ ಗಂಟು
ತಂದೀತು ಅನಿಶ್ಚಿತತೆಯಲ್ಲೆ
ನಿಶ್ಚಿತ ಬಾಳಿನ ಲಂಗರು.
ನಮ್ಮಹಡಗು ಬ್ಯಾಂಕು
ಬಾಳು ದೀರ್ಘ ಪಯಣ
ಕೊನೆ ಮೊದಲಿಲ್ಲದ ವರ್ಗಗಳು
ಆಂತರಿಕ ಬಾಹ್ಯ ಒತ್ತಡಗಳು
ರಾಜಕೀಯ ವಶೀಲಿಗಳು
ದಿನ ನಿತ್ಯದ ನೂರೆಂಟು ಸಮಸ್ಯೆಗಳು
ಹುಟ್ಟೂರು ಬಿಟ್ಟು, ಕಳೆದು ದಶಕಗಳು
ಊರಿಂದೂರಿಗೆ ವಲಸೆ ಹೋದಲ್ಲಿ –
ಎಲ್ಲಿಯೋ ಮದುವೆಯಾಗಿ
ಬೇರೆಲ್ಲಿಯೋ ಮನೆ ಕಟ್ಟಿ
ದೇವರ ದಯೆಯಿಂದ,
ದೊಡ್ಡವರ ಆಶೀರ್ವಾದದಿಂದ
ಮರ್ಯಾದೆಯಾಗಿ ರಿಟೈರಾದರೆ
ಏಳೇಳು ಜನ್ಮಗಳ ಪುಣ್ಯ.
ನಿಜಕ್ಕೂ..ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ.
*****
೧೧-೦೬-೧೯೯೨

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...