Home / ಕವನ / ಕವಿತೆ / ಹಡಗು

ಹಡಗು

ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ
ದೂರದಿಂದ ನೋಡಿ
ಅದರ ಸೌಂದರ್ಯ,
ತಿಳಿಯದೆ ಅಂತರ್ಯ,
ಸ್ಥಳ ಗಿಟ್ಟಿಸಲು ಹೋದವರು,
ಹೋಗಲು ಹಂಬಲಿಸಿದವರು
ಇದ್ದಾರು ಅಸಂಖ್ಯ ಜನರು.
ಒಳ ಹೊಕ್ಕು ಕುಳಿತವರಿಗೇ ಗೊತ್ತು
ಅಲ್ಲಿನ ವಿಶಿಷ್ಟ ಜಗತ್ತು
ನಿಂತ ನೆಲವೇ ಭದ್ರವಿಲ್ಲ
ಸದಾ ಕುಲುಕು ನಡಿಗೆ
ಹೊರಟಾಗಿದೆ. ಹಿಂತಿರುಗುವಂತಿಲ್ಲ,
ಮಧ್ಯೆ ಇಳಿಯುವ ಮಾತೇ ಇಲ್ಲ!
ತೇಲುತ್ತಿರುವ ಜಲವೇ ಉಕ್ಕಿ
ತನ್ನ ಒಡಲಲ್ಲಿ ಸೇರಿಸಿ
ಹೆಸರಿಲ್ಲದಂತೆ ಮಾಡೀತು.
ಅನಿರೀಕ್ಷಿತ ಬಂದ ತಿಮಿಂಗಿಲ
ಬುಡಮೇಲು ಮಾಡೀತು
ಕಡಲಗಳ್ಳರ ಕಾಟ ಒಂದೆಡೆ,
ಬಿರುಗಾಳಿಯ ಭೀತಿ ಮತ್ತೊಂದೆಡೆ.
ಶೇಖರಿಸಿರುವ ಊಟ, ನೀರು
ಮುಗಿಯುವ ಮುನ್ನ ಒಂದೂರು
ಸೇರುವ ನೆಲೆಸುವ ಆಸೆ ನೂರು
ಸೇರಿದರೆ ಸೇರೇವು,
ಕರೆ ಬಂದರೆ ಮತ್ತೆ ಹೊರಟೆವು
ದೀರ್ಘ ಪಯಣ ತಂದ ನಂಟು
ತಿಳಿಯದೆ ಹಾಕಿಕೊಂಡ ಗಂಟು
ತಂದೀತು ಅನಿಶ್ಚಿತತೆಯಲ್ಲೆ
ನಿಶ್ಚಿತ ಬಾಳಿನ ಲಂಗರು.
ನಮ್ಮಹಡಗು ಬ್ಯಾಂಕು
ಬಾಳು ದೀರ್ಘ ಪಯಣ
ಕೊನೆ ಮೊದಲಿಲ್ಲದ ವರ್ಗಗಳು
ಆಂತರಿಕ ಬಾಹ್ಯ ಒತ್ತಡಗಳು
ರಾಜಕೀಯ ವಶೀಲಿಗಳು
ದಿನ ನಿತ್ಯದ ನೂರೆಂಟು ಸಮಸ್ಯೆಗಳು
ಹುಟ್ಟೂರು ಬಿಟ್ಟು, ಕಳೆದು ದಶಕಗಳು
ಊರಿಂದೂರಿಗೆ ವಲಸೆ ಹೋದಲ್ಲಿ –
ಎಲ್ಲಿಯೋ ಮದುವೆಯಾಗಿ
ಬೇರೆಲ್ಲಿಯೋ ಮನೆ ಕಟ್ಟಿ
ದೇವರ ದಯೆಯಿಂದ,
ದೊಡ್ಡವರ ಆಶೀರ್ವಾದದಿಂದ
ಮರ್ಯಾದೆಯಾಗಿ ರಿಟೈರಾದರೆ
ಏಳೇಳು ಜನ್ಮಗಳ ಪುಣ್ಯ.
ನಿಜಕ್ಕೂ..ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ.
*****
೧೧-೦೬-೧೯೯೨

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...