Home / ಕವನ / ಕವಿತೆ / ಚೆಲುವು

ಚೆಲುವು

ಅದೋ!
ಅಲ್ಲಿಹುದು ಹೂವು
ಅಂತಿಂತಹ ಹೂವಲ್ಲವದು, ತಾವರೆ ಹೂವು.
ತನ್ನಂದದಿಂದೆಲ್ಲರ ಸೆಳೆವುದಿದು
ಸಹಸ್ರ ಪತ್ರದ ಸುರಮ್ಯ ಹೂವು.
ದೂರದಿಂದ ನೋಡಿದರೆ ಬಲು ರಮ್ಯ
ಅಲ್ಲಿಂದಲೇ ಚೆಲುವಿನ ಸ್ವಾಗತವೀಯುವುದು
ಬಳಿಗೆ ಹೋದರೆ ಮುಖವ ಮುಚ್ಚುವುದು!
ಅದರಂದ ಕಂಡು ಓಡೋಡಿ ಬರುವುದು
ದುಂಬಿಗಳ ಹಿಂಡು.
ಮಧು ರಸ ಹೀರುತ್ತಾ ಮೈ ಮರೆತಿದೆ ದುಂಬಿ
ಹೂ ಮೊಗವ ಮುಚ್ಚಿದರೂ ತಿಳಿಯದಾ ದುಂಬಿ.
ಅರೆ! ಏನಿದು ಉಸಿರು ಕಟ್ಟುತ್ತಿದೆ?
ಪ್ರಾಣ ಹೋದರೂ ಸರಿಯೇ ಹೂವಿನಾ ಮಡಿಲಿನಲಿ.
ಇಂತಹ ದುಂಬಿಗಳೆಷ್ಟೋ?!
ಹೂವಿಗಿದು ಆಟ ಚೆಲ್ಲಾಟ
ದುಂಬಿಗೆ ಪ್ರಾಣ ಸಂಕಟ
ಆದರೂ ಆಸೆ, ಚಪಲ!
ಇದರಲ್ಲಿ ಬಿದ್ದು ಸತ್ತ ದುಂಬಿಗಳೆಷ್ಟೋ?
ದೂರದಿಂದ ಚೆಲುವ ಕಂಡು
ಓಡಿ ಬಂದು ಕೈಲಿ ಹಿಡಿದರೆ,
ಥೂ ಎಂಥ ಕೊಳಕು
ಒಳಗೆಲ್ಲಾ ಬರಿಯ ಹುಳುಕು
ಇದಿರುವುದೋ ಕೊಚ್ಚೆಯಲಿ
ಛೇ, ನಾನೇಕೆ ಬಂದೆ ಈ ಹೂವ ನೋಡಿ.
ಇದರಿಂದ ದೂರಕ್ಕೆ ಹೋಗುವೆನು ಓಡಿ.
*****
೧೦-೦೪-೧೯೭೫

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...