Home / ಕವನ / ಕವಿತೆ / ಕಾರ್ಗಿಲ್ ವಿಜಯ

ಕಾರ್ಗಿಲ್ ವಿಜಯ

ಮುಗಿಲ ಮುತ್ತಿಡುವ ಗಿರಿ ಶಿಖರಗಳಲಿ
ತೊರೆ, ನದಿಗಳ ಹಿಮದ ಜಾರುಂಡೆಗಳಲಿ

ಕಾಳಕೂಟ ರೂಪದ ಕಾರ್ಗಿಲ್ ಕಣಿವೆಯಲ್ಲಿ
ನರ್ತನ ಗೈಯ್ಯುತಿದ್ದವು ಸಾವು ನೋವುಗಳು

ತಾಂಡವ ರೂಪದ ವೀರಯೋಧರು
ಭಾರತಾಂಬೆಯ ಹೆಮ್ಮೆ ಕುವರರು

ಚಳಿಗಾಳಿ ಹಸಿವೆನ್ನದೆ
ಜೈಹಿಂದ್ ಎನ್ನುತಲಿ ಎದೆಯೊಡ್ಡಿ ನಡೆದರು

ಅಜೇಯ, ಅಹುಜ, ಸೌರವ, ಕಾಲಿಯಾ
ವಿಕ್ರಮ ಬಾತ್ರಾ, ಕರ್ನಲ ವಿಶ್ವನಾಥ

ವಿನೋದ ಪಾಂಡೆ, ಮೇಜರ ಶರವಣನ್
ವಿವೇಕ ಗುಪ್ತ, ಯಶವೀರಂತರನೇಕ

ವೀರಯೋಧ ಸೇನಾನಿ ಅಮರರಾದರು
ತ್ರಿವರ್ಣ ಧ್ವಜ ಹಾರಿಸುತಲಿ

ಕಾರ್ಗಿಲ್ ಕಣಿವೆ ಕಾರ್ಗತ್ತಲಲಿ
ಕಲಿಗಳಾಗಿ ಕಾದಾಡಿದ ವೀರರು

ಕನ್ನಡಾಂಬೆಯ ಕುಡಿಗಳು ಧೊಂಡಿಬಾ, ವೆಂಕಟ,
ಗುರುಬಸಯ್ಯಾ, ದಾವಲಸಾಬ, ಕಾವೇರಪ್ಪ, ಪೋತರಾಜ,
ಸಿದ್ದನಗೌಡ, ಯಶವಂತ, ಮಡಿವಾಳಪ್ಪ, ಮೋಹಿಲನ್,

ಕಾರ್ಗಿಲ್ ವಿಜಯ ಕಾರ್ಯಾಚರಣೆಯ
ಚಿರತೆಗಳಾಗಿ ಸಿಂಹ ಗರ್ಜನೆಗೈದರು

ಕಾರ್ಗಿಲ್, ಕಕ್ಸರ್‍, ಡ್ರಾಸ, ಮುಸ್ಕೋಹಾ
ಬಟಾಲಕ, ಟೋಲೋರಿಂಗ್, ಟೈಗರ ಶಿಖರಗಳಪ್ಪಿದರು

ಶ್ವೇತ ವಸ್ತ್ರಾಧಾರಿ, ಪ್ರಶಾಂತ…
ಶಿಖರಗಳಲ್ಲೆಡೆ ಕಾಲಿಟ್ಟಡಗಿದ ಕಪಿಗಳ
ರಕ್ಕಸ, ರಕ್ತ ಪಿಪಾಶೆಯ ವೈರಿ

ಮುಜಾಹಿದ್ದಿನ, ಜೆಹಾದ ಬಾಡಿಗೆ ಪಡೆ
ಕಾರುವ ಶೆಲ್ ಗುಂಡಿನ ದಾಳಿಗೆ
ಮೈಯೊಡ್ಡುತ ಎದೆ ಸೀಳಿದರು…

ವೈರಿಪಡೆಯ ರಕ್ತ ಚೆಲ್ಲುತ ವೀರಯೋಧರು
ಮಾತೃಭೂಮಿಯ ಮಡಿಲಲಿ ಮಡಿದರು

ಅಮರರಾದರು ವೀರ ಸಹೋದರರು
ಮಾತೃಭೂಮಿಯ ಋಣ ತೀರಿಸುತಲಿ

ತ್ಯಾಗ ಬಲಿದಾನಗಳಿಗೆ ಸಾಟಿಯಿರದೆ
ಪ್ರತಿ ಭಾರತೀಯನ ಮನದಲಿ ಉಳಿದರು

ದೇಶದ ಹೆಮ್ಮೆಯ ವೀರಚೇತನರು
ಕಾರ್ಗಿಲ್‌ದ ವೀರಮರಣದ
ವೀರಯೋಧರು ಹೆಮ್ಮೆಯ ಕುವರರು.

***

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...