Home / ಕವನ / ಕವಿತೆ / ಕಾರ್ಗಿಲ್ ವಿಜಯ

ಕಾರ್ಗಿಲ್ ವಿಜಯ

ಮುಗಿಲ ಮುತ್ತಿಡುವ ಗಿರಿ ಶಿಖರಗಳಲಿ
ತೊರೆ, ನದಿಗಳ ಹಿಮದ ಜಾರುಂಡೆಗಳಲಿ

ಕಾಳಕೂಟ ರೂಪದ ಕಾರ್ಗಿಲ್ ಕಣಿವೆಯಲ್ಲಿ
ನರ್ತನ ಗೈಯ್ಯುತಿದ್ದವು ಸಾವು ನೋವುಗಳು

ತಾಂಡವ ರೂಪದ ವೀರಯೋಧರು
ಭಾರತಾಂಬೆಯ ಹೆಮ್ಮೆ ಕುವರರು

ಚಳಿಗಾಳಿ ಹಸಿವೆನ್ನದೆ
ಜೈಹಿಂದ್ ಎನ್ನುತಲಿ ಎದೆಯೊಡ್ಡಿ ನಡೆದರು

ಅಜೇಯ, ಅಹುಜ, ಸೌರವ, ಕಾಲಿಯಾ
ವಿಕ್ರಮ ಬಾತ್ರಾ, ಕರ್ನಲ ವಿಶ್ವನಾಥ

ವಿನೋದ ಪಾಂಡೆ, ಮೇಜರ ಶರವಣನ್
ವಿವೇಕ ಗುಪ್ತ, ಯಶವೀರಂತರನೇಕ

ವೀರಯೋಧ ಸೇನಾನಿ ಅಮರರಾದರು
ತ್ರಿವರ್ಣ ಧ್ವಜ ಹಾರಿಸುತಲಿ

ಕಾರ್ಗಿಲ್ ಕಣಿವೆ ಕಾರ್ಗತ್ತಲಲಿ
ಕಲಿಗಳಾಗಿ ಕಾದಾಡಿದ ವೀರರು

ಕನ್ನಡಾಂಬೆಯ ಕುಡಿಗಳು ಧೊಂಡಿಬಾ, ವೆಂಕಟ,
ಗುರುಬಸಯ್ಯಾ, ದಾವಲಸಾಬ, ಕಾವೇರಪ್ಪ, ಪೋತರಾಜ,
ಸಿದ್ದನಗೌಡ, ಯಶವಂತ, ಮಡಿವಾಳಪ್ಪ, ಮೋಹಿಲನ್,

ಕಾರ್ಗಿಲ್ ವಿಜಯ ಕಾರ್ಯಾಚರಣೆಯ
ಚಿರತೆಗಳಾಗಿ ಸಿಂಹ ಗರ್ಜನೆಗೈದರು

ಕಾರ್ಗಿಲ್, ಕಕ್ಸರ್‍, ಡ್ರಾಸ, ಮುಸ್ಕೋಹಾ
ಬಟಾಲಕ, ಟೋಲೋರಿಂಗ್, ಟೈಗರ ಶಿಖರಗಳಪ್ಪಿದರು

ಶ್ವೇತ ವಸ್ತ್ರಾಧಾರಿ, ಪ್ರಶಾಂತ…
ಶಿಖರಗಳಲ್ಲೆಡೆ ಕಾಲಿಟ್ಟಡಗಿದ ಕಪಿಗಳ
ರಕ್ಕಸ, ರಕ್ತ ಪಿಪಾಶೆಯ ವೈರಿ

ಮುಜಾಹಿದ್ದಿನ, ಜೆಹಾದ ಬಾಡಿಗೆ ಪಡೆ
ಕಾರುವ ಶೆಲ್ ಗುಂಡಿನ ದಾಳಿಗೆ
ಮೈಯೊಡ್ಡುತ ಎದೆ ಸೀಳಿದರು…

ವೈರಿಪಡೆಯ ರಕ್ತ ಚೆಲ್ಲುತ ವೀರಯೋಧರು
ಮಾತೃಭೂಮಿಯ ಮಡಿಲಲಿ ಮಡಿದರು

ಅಮರರಾದರು ವೀರ ಸಹೋದರರು
ಮಾತೃಭೂಮಿಯ ಋಣ ತೀರಿಸುತಲಿ

ತ್ಯಾಗ ಬಲಿದಾನಗಳಿಗೆ ಸಾಟಿಯಿರದೆ
ಪ್ರತಿ ಭಾರತೀಯನ ಮನದಲಿ ಉಳಿದರು

ದೇಶದ ಹೆಮ್ಮೆಯ ವೀರಚೇತನರು
ಕಾರ್ಗಿಲ್‌ದ ವೀರಮರಣದ
ವೀರಯೋಧರು ಹೆಮ್ಮೆಯ ಕುವರರು.

***

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...