Home / ಕವನ / ಕವಿತೆ / ಕಾರ್ಗಿಲ್ ವಿಜಯ

ಕಾರ್ಗಿಲ್ ವಿಜಯ

ಮುಗಿಲ ಮುತ್ತಿಡುವ ಗಿರಿ ಶಿಖರಗಳಲಿ
ತೊರೆ, ನದಿಗಳ ಹಿಮದ ಜಾರುಂಡೆಗಳಲಿ

ಕಾಳಕೂಟ ರೂಪದ ಕಾರ್ಗಿಲ್ ಕಣಿವೆಯಲ್ಲಿ
ನರ್ತನ ಗೈಯ್ಯುತಿದ್ದವು ಸಾವು ನೋವುಗಳು

ತಾಂಡವ ರೂಪದ ವೀರಯೋಧರು
ಭಾರತಾಂಬೆಯ ಹೆಮ್ಮೆ ಕುವರರು

ಚಳಿಗಾಳಿ ಹಸಿವೆನ್ನದೆ
ಜೈಹಿಂದ್ ಎನ್ನುತಲಿ ಎದೆಯೊಡ್ಡಿ ನಡೆದರು

ಅಜೇಯ, ಅಹುಜ, ಸೌರವ, ಕಾಲಿಯಾ
ವಿಕ್ರಮ ಬಾತ್ರಾ, ಕರ್ನಲ ವಿಶ್ವನಾಥ

ವಿನೋದ ಪಾಂಡೆ, ಮೇಜರ ಶರವಣನ್
ವಿವೇಕ ಗುಪ್ತ, ಯಶವೀರಂತರನೇಕ

ವೀರಯೋಧ ಸೇನಾನಿ ಅಮರರಾದರು
ತ್ರಿವರ್ಣ ಧ್ವಜ ಹಾರಿಸುತಲಿ

ಕಾರ್ಗಿಲ್ ಕಣಿವೆ ಕಾರ್ಗತ್ತಲಲಿ
ಕಲಿಗಳಾಗಿ ಕಾದಾಡಿದ ವೀರರು

ಕನ್ನಡಾಂಬೆಯ ಕುಡಿಗಳು ಧೊಂಡಿಬಾ, ವೆಂಕಟ,
ಗುರುಬಸಯ್ಯಾ, ದಾವಲಸಾಬ, ಕಾವೇರಪ್ಪ, ಪೋತರಾಜ,
ಸಿದ್ದನಗೌಡ, ಯಶವಂತ, ಮಡಿವಾಳಪ್ಪ, ಮೋಹಿಲನ್,

ಕಾರ್ಗಿಲ್ ವಿಜಯ ಕಾರ್ಯಾಚರಣೆಯ
ಚಿರತೆಗಳಾಗಿ ಸಿಂಹ ಗರ್ಜನೆಗೈದರು

ಕಾರ್ಗಿಲ್, ಕಕ್ಸರ್‍, ಡ್ರಾಸ, ಮುಸ್ಕೋಹಾ
ಬಟಾಲಕ, ಟೋಲೋರಿಂಗ್, ಟೈಗರ ಶಿಖರಗಳಪ್ಪಿದರು

ಶ್ವೇತ ವಸ್ತ್ರಾಧಾರಿ, ಪ್ರಶಾಂತ…
ಶಿಖರಗಳಲ್ಲೆಡೆ ಕಾಲಿಟ್ಟಡಗಿದ ಕಪಿಗಳ
ರಕ್ಕಸ, ರಕ್ತ ಪಿಪಾಶೆಯ ವೈರಿ

ಮುಜಾಹಿದ್ದಿನ, ಜೆಹಾದ ಬಾಡಿಗೆ ಪಡೆ
ಕಾರುವ ಶೆಲ್ ಗುಂಡಿನ ದಾಳಿಗೆ
ಮೈಯೊಡ್ಡುತ ಎದೆ ಸೀಳಿದರು…

ವೈರಿಪಡೆಯ ರಕ್ತ ಚೆಲ್ಲುತ ವೀರಯೋಧರು
ಮಾತೃಭೂಮಿಯ ಮಡಿಲಲಿ ಮಡಿದರು

ಅಮರರಾದರು ವೀರ ಸಹೋದರರು
ಮಾತೃಭೂಮಿಯ ಋಣ ತೀರಿಸುತಲಿ

ತ್ಯಾಗ ಬಲಿದಾನಗಳಿಗೆ ಸಾಟಿಯಿರದೆ
ಪ್ರತಿ ಭಾರತೀಯನ ಮನದಲಿ ಉಳಿದರು

ದೇಶದ ಹೆಮ್ಮೆಯ ವೀರಚೇತನರು
ಕಾರ್ಗಿಲ್‌ದ ವೀರಮರಣದ
ವೀರಯೋಧರು ಹೆಮ್ಮೆಯ ಕುವರರು.

***

 

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...