ಬಿರುಗಾಳಿ

ನೋವಿನ ಬಿರುಗಾಳಿ
ಬಾಳಲಿ ಬೀಸುತಲಿ
ಬರೆ ನೀಡುತ…
ಬಡಿದು-ನೋಯಿಸುತ
ತನು-ಮನ ಕಲುಕುತಿಹದು
ಪ್ರತಿಭೆ-ಪ್ರಸನ್ನತೆಗಳ
ಭ್ರಮನಿರಸನದ ಆದರ್ಶ
ಬವಣೆಯಲಿ ಬಳಲುತಿಹದು

ಅನಾಚಾರ… ಕಂದಾಚಾರ
ರಾರಾಜಿಸುತ… ರಂಜನೆಯಲಿ
ಎಲ್ಲೆಡೆ ಹರಡಿಹವು
ಏಕನಾದದಿ ಮಿಡಿಯುತ
ಮಾರಕ ಯಾತನೆಯಲಿ
ಗಹ… ಗಹಿಸುತಿಹವು

ಸುಪ್ತ ಮನಸ್ಸುಗಳ
ಆಳದಿ ತುಂಬಿ…
ಬದುಕಿನ ಪ್ರಶ್ನೆಗಳೇ…
ಕೇಳುತಲಿ ಹಲವು
ಜೀವಂತ ಹೆಣವಾಗಿಸುವ
ಹುನ್ನಾರದಿ ಆತ್ಮ ಸ್ಥೈರ್ಯ
ಅಂತರಾಳದಿ ಎಚ್ಚರಗೊಳಿಸುತಿಹವು

ಏಳಬೇಕು… ಎಚ್ಚರದಿ
ಎದ್ದೇಳಬೇಕು… ಮನಸ್ಸು
ಆತ್ಮ – ಗುಂಡಾಗಿಸಿ…
ಸಿಡಿಯುತಲಿ ಉರುಳಬೇಕು
ಕತ್ತಲೆ ಸೀಳುವ ಮಿಂಚಾಗಿ
ದೀವಿಗೆಯ ಬೆಂಕಿ ಬೆಳಕಾಗುತ

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀರೆಂದರೆ
Next post ಹೌದಪ್ಪ ಹೌದೋ ನೀನೇ ದೇವರಾ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys