ಕರುಣೆ ತೋರು ನೀನೆನಗೆ

ಕರುಣೆ ತೋರು ನೀನೆನಗೆ
ನನ್ನ ಬಾಳ ಏಳಿಗೆಗೆ |
ದಾರಿದೀಪವಾಗೆನಗೆ
ನನ್ನ ಬಾಳ ಈ ಹಾದಿಗೆ ||

ಗುರುನೀನೇ ಗುರಿತೋರಿಸು ನೀನೇ
ಇನ್ನಾರಿಹರೆನಗೆ ನೀನಲ್ಲದೀಬಾಳಿಗೆ|
ಬದುಕ ಬವಣೆಯ ಬಿಡಿಸು
ಬಾಳ ಮಹಿಮೆಯ ತಿಳಿಸು||

ಏಕೆ ಮತ್ತೆ ಮತ್ತೆ ಪುನರಪಿಸುವೆವೋ ಕಾಣೆ
ನಾನಿದರ ಮರ್ಮವನರಿಯೆ?|
ನಿನ್ನ ಹೆಜ್ಜೆಯಲೆನ್ನ ಹೆಜ್ಜೆಯ ನೀನಿರಿಸು
ಈ ಸಾಗರದ ದಡವ ನೀ ಸೇರಿಸು||

ಪಾಪವೋ, ಶಾಪವೋ, ಪೂಣ್ಯವೋ
ನನ್ನ ಹಿಂದಿನ ಅಕರ್ಮವೊ ಕಾಣೆ|
ಕೊನೆಗಾಣಿಸಿ ಜನ್ಮದಲಿ ಎಲ್ಲದನು
ನೀ ದಯತೋರಿ ಪರಿಪೂರ್ಣಗೊಳಿಸೆನ್ನಾ
ಮತ್ತೆ ಮರುಕಳಿಸದಂತೆ ಈ ನರಜನ್ಮ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರೀಮಂತ
Next post ಹೀಗಿರಲಿ ಭಕ್ತಿ

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys