Home / ಕವನ / ಕವಿತೆ / ಅವಸರ ಬೇಡ

ಅವಸರ ಬೇಡ

ಬವಣೆಯ ಬದುಕು
ಭರವಸೆಯಲಿ ಸವೆಸುತ್ತಾ
ದುಡಿಮೆಯಲಿ ಕಾಲ ಕಳೆಯುತ್ತಾ
ತಿನ್ನುವ ಅನ್ನವ ತೊರೆದು
ಹೊರಟೆಯೇನಣ್ಣ ಆತ್ಮಹತ್ಯೆಗೆ
ಆತುರಬೇಡ… ಅವಸರಬೇಡ
ನಿನ್ನ ಒಡಲ ಕುಡಿಗಳಿಹರು
ಆತಂಕಬೇಡ ನಾವಿರುವೆವು ನಿಮಗಾಗಿ

ಹಸಿವೆ.. ಹರಿ ಹಾಯ್ದರೂ…
ನಾವೆಲ್ಲಾ… ಒಂದೊತ್ತಿನ
ಉಣ್ಣುವ ಊಟವು ಬಿಟ್ಟು
ಮೇಘನ ಮೇಲೆ ಆಣೆಯಿಟ್ಟು
ಬೇಡೋಣ ಭೂತಾಯಿ ಒಲವಿಗೆ
ಆತಂಕಬೇಡ ನಾವಿರುವೆವು ನಿಮಗಾಗಿ

ಹೋಗಿಯೇ… ಬಿಡಲಿ
ಅನುಕಂಪವಿರದೆ ಈ ದೇಹದ
ಆ ಒಂದು ಕ್ಷಣ ಉಸಿರು…
ಆಗಲಿ ಆವಾಗಲಾದರೂ
ಭೂಮಡಿಲ ಒಡಲು ಹಸಿರು
ಆತಂಕಬೇಡ ನಾವಿರುವೆವು ನಿಮಗಾಗಿ

ಬದುಕು ಬರಿ ಬರವಲ್ಲ
ಸುಡು ಬಿಸಿಲಿನಿ ಸಿಡೆಲೆಯಾದರೂ
ಬಿಡಲು-ಕೈಬಿಡಳು ಭೂಮಾತೆ
ತನ್ನ-ಕುಡಿಗಳಾಗಿರುವ…
ನಮ್ಮೆಲ್ಲರನ್ನೂ…. ಪೊರೆದವಳು
ಆತಂಕಬೇಡ… ನಾವಿರುವೆವು ನಿಮಗಾಗಿ

ಬೆಂಕಿ ಉಂಡೆಯ ಝಳದಲ್ಲೂ
ತಂಪನೆಯ ತಂಗಾಳಿ ಕಾಣುತ
ಮೈಕೊರೆವ ಮಾಗಿ ಚಳಿಯಲ್ಲೂ
ಬೆಚ್ಚಗಿನ ಬದುಕು ಅರಸಿದವರು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಸಿಲು-ಗಾಳಿ-ಮಳೆಯೆನ್ನದೆ
ಮೈ-ಕೈ ಒಡ್ಡಿ ಮುದಡದ
ಬೆಳೆದು… ಬಾಳಿದವು…
ನನ್ನೂರಿನ ಹೆಮ್ಮೆಯ ಸಿರಿಯುಳ್ಳ
ನಾಡಿನ ಸಾರ್ವಭೌಮರು ನೀವು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಡುವದಿಲ್ಲ… ನಾವು…
ಶರಣಾಗಲು ಸಾವಿಗೇ ನೀವು
ಬರದ ಬೇಗೆಯ ಹಲವು
ವೃಷ್ಟಿ-ಅನಾವೃಷ್ಟಿಗಳೇ ಮುತ್ತಲಿ
ಆತಂಕಬೇಡ ನಾವಿರುವೆವು ನಿಮಗಾಗಿ

ಬೆಂಕಿ ಉಗುಳುತ ಚೆಲ್ಲಲಿ
ಧರೆಯೆ ದಹಿಸುತಲಿ…
ಎದೆಗುಂದಿ… ತಲೆಬಾಗದೆ
ಧೈರ್ಯ ಒಂದೆ ಸರ್ವಸಾಧನೆ
ಮೇರು ಸವಾಲು ಸ್ವೀಕಾರವಿರಲಿ
ಆತಂಕಬೇಡ ನಾವಿರುವೆವು ನಿಮಗಾಗ….

ಬದುಕು-ಗೆಲ್ಲುತಲಿ
ಜಗವೆಲ್ಲಾ ಗೆಲ್ಲಿರಿ…
ಆತ್ಮಹತ್ಯೆಯ ಆಲಿಂಗನದಿ
ಬಡತನದ ಭೂತಕ್ಕೆ ಬೆದರಿ
ಮರೀಚಿಕೆ ಸವಾರಿಬೇಡ
ಆತಂಕಬೇಡ… ನಾವಿರುವೆವು
ನಿಮಗಾಗಿ ಸದಾ… ನಿಮಗಾಗಿ

*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...