Home / ಕವನ / ಕವಿತೆ / ಅವಸರ ಬೇಡ

ಅವಸರ ಬೇಡ

ಬವಣೆಯ ಬದುಕು
ಭರವಸೆಯಲಿ ಸವೆಸುತ್ತಾ
ದುಡಿಮೆಯಲಿ ಕಾಲ ಕಳೆಯುತ್ತಾ
ತಿನ್ನುವ ಅನ್ನವ ತೊರೆದು
ಹೊರಟೆಯೇನಣ್ಣ ಆತ್ಮಹತ್ಯೆಗೆ
ಆತುರಬೇಡ… ಅವಸರಬೇಡ
ನಿನ್ನ ಒಡಲ ಕುಡಿಗಳಿಹರು
ಆತಂಕಬೇಡ ನಾವಿರುವೆವು ನಿಮಗಾಗಿ

ಹಸಿವೆ.. ಹರಿ ಹಾಯ್ದರೂ…
ನಾವೆಲ್ಲಾ… ಒಂದೊತ್ತಿನ
ಉಣ್ಣುವ ಊಟವು ಬಿಟ್ಟು
ಮೇಘನ ಮೇಲೆ ಆಣೆಯಿಟ್ಟು
ಬೇಡೋಣ ಭೂತಾಯಿ ಒಲವಿಗೆ
ಆತಂಕಬೇಡ ನಾವಿರುವೆವು ನಿಮಗಾಗಿ

ಹೋಗಿಯೇ… ಬಿಡಲಿ
ಅನುಕಂಪವಿರದೆ ಈ ದೇಹದ
ಆ ಒಂದು ಕ್ಷಣ ಉಸಿರು…
ಆಗಲಿ ಆವಾಗಲಾದರೂ
ಭೂಮಡಿಲ ಒಡಲು ಹಸಿರು
ಆತಂಕಬೇಡ ನಾವಿರುವೆವು ನಿಮಗಾಗಿ

ಬದುಕು ಬರಿ ಬರವಲ್ಲ
ಸುಡು ಬಿಸಿಲಿನಿ ಸಿಡೆಲೆಯಾದರೂ
ಬಿಡಲು-ಕೈಬಿಡಳು ಭೂಮಾತೆ
ತನ್ನ-ಕುಡಿಗಳಾಗಿರುವ…
ನಮ್ಮೆಲ್ಲರನ್ನೂ…. ಪೊರೆದವಳು
ಆತಂಕಬೇಡ… ನಾವಿರುವೆವು ನಿಮಗಾಗಿ

ಬೆಂಕಿ ಉಂಡೆಯ ಝಳದಲ್ಲೂ
ತಂಪನೆಯ ತಂಗಾಳಿ ಕಾಣುತ
ಮೈಕೊರೆವ ಮಾಗಿ ಚಳಿಯಲ್ಲೂ
ಬೆಚ್ಚಗಿನ ಬದುಕು ಅರಸಿದವರು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಸಿಲು-ಗಾಳಿ-ಮಳೆಯೆನ್ನದೆ
ಮೈ-ಕೈ ಒಡ್ಡಿ ಮುದಡದ
ಬೆಳೆದು… ಬಾಳಿದವು…
ನನ್ನೂರಿನ ಹೆಮ್ಮೆಯ ಸಿರಿಯುಳ್ಳ
ನಾಡಿನ ಸಾರ್ವಭೌಮರು ನೀವು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಡುವದಿಲ್ಲ… ನಾವು…
ಶರಣಾಗಲು ಸಾವಿಗೇ ನೀವು
ಬರದ ಬೇಗೆಯ ಹಲವು
ವೃಷ್ಟಿ-ಅನಾವೃಷ್ಟಿಗಳೇ ಮುತ್ತಲಿ
ಆತಂಕಬೇಡ ನಾವಿರುವೆವು ನಿಮಗಾಗಿ

ಬೆಂಕಿ ಉಗುಳುತ ಚೆಲ್ಲಲಿ
ಧರೆಯೆ ದಹಿಸುತಲಿ…
ಎದೆಗುಂದಿ… ತಲೆಬಾಗದೆ
ಧೈರ್ಯ ಒಂದೆ ಸರ್ವಸಾಧನೆ
ಮೇರು ಸವಾಲು ಸ್ವೀಕಾರವಿರಲಿ
ಆತಂಕಬೇಡ ನಾವಿರುವೆವು ನಿಮಗಾಗ….

ಬದುಕು-ಗೆಲ್ಲುತಲಿ
ಜಗವೆಲ್ಲಾ ಗೆಲ್ಲಿರಿ…
ಆತ್ಮಹತ್ಯೆಯ ಆಲಿಂಗನದಿ
ಬಡತನದ ಭೂತಕ್ಕೆ ಬೆದರಿ
ಮರೀಚಿಕೆ ಸವಾರಿಬೇಡ
ಆತಂಕಬೇಡ… ನಾವಿರುವೆವು
ನಿಮಗಾಗಿ ಸದಾ… ನಿಮಗಾಗಿ

*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...