Home / ಕವನ / ಕವಿತೆ / ಅವಸರ ಬೇಡ

ಅವಸರ ಬೇಡ

ಬವಣೆಯ ಬದುಕು
ಭರವಸೆಯಲಿ ಸವೆಸುತ್ತಾ
ದುಡಿಮೆಯಲಿ ಕಾಲ ಕಳೆಯುತ್ತಾ
ತಿನ್ನುವ ಅನ್ನವ ತೊರೆದು
ಹೊರಟೆಯೇನಣ್ಣ ಆತ್ಮಹತ್ಯೆಗೆ
ಆತುರಬೇಡ… ಅವಸರಬೇಡ
ನಿನ್ನ ಒಡಲ ಕುಡಿಗಳಿಹರು
ಆತಂಕಬೇಡ ನಾವಿರುವೆವು ನಿಮಗಾಗಿ

ಹಸಿವೆ.. ಹರಿ ಹಾಯ್ದರೂ…
ನಾವೆಲ್ಲಾ… ಒಂದೊತ್ತಿನ
ಉಣ್ಣುವ ಊಟವು ಬಿಟ್ಟು
ಮೇಘನ ಮೇಲೆ ಆಣೆಯಿಟ್ಟು
ಬೇಡೋಣ ಭೂತಾಯಿ ಒಲವಿಗೆ
ಆತಂಕಬೇಡ ನಾವಿರುವೆವು ನಿಮಗಾಗಿ

ಹೋಗಿಯೇ… ಬಿಡಲಿ
ಅನುಕಂಪವಿರದೆ ಈ ದೇಹದ
ಆ ಒಂದು ಕ್ಷಣ ಉಸಿರು…
ಆಗಲಿ ಆವಾಗಲಾದರೂ
ಭೂಮಡಿಲ ಒಡಲು ಹಸಿರು
ಆತಂಕಬೇಡ ನಾವಿರುವೆವು ನಿಮಗಾಗಿ

ಬದುಕು ಬರಿ ಬರವಲ್ಲ
ಸುಡು ಬಿಸಿಲಿನಿ ಸಿಡೆಲೆಯಾದರೂ
ಬಿಡಲು-ಕೈಬಿಡಳು ಭೂಮಾತೆ
ತನ್ನ-ಕುಡಿಗಳಾಗಿರುವ…
ನಮ್ಮೆಲ್ಲರನ್ನೂ…. ಪೊರೆದವಳು
ಆತಂಕಬೇಡ… ನಾವಿರುವೆವು ನಿಮಗಾಗಿ

ಬೆಂಕಿ ಉಂಡೆಯ ಝಳದಲ್ಲೂ
ತಂಪನೆಯ ತಂಗಾಳಿ ಕಾಣುತ
ಮೈಕೊರೆವ ಮಾಗಿ ಚಳಿಯಲ್ಲೂ
ಬೆಚ್ಚಗಿನ ಬದುಕು ಅರಸಿದವರು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಸಿಲು-ಗಾಳಿ-ಮಳೆಯೆನ್ನದೆ
ಮೈ-ಕೈ ಒಡ್ಡಿ ಮುದಡದ
ಬೆಳೆದು… ಬಾಳಿದವು…
ನನ್ನೂರಿನ ಹೆಮ್ಮೆಯ ಸಿರಿಯುಳ್ಳ
ನಾಡಿನ ಸಾರ್ವಭೌಮರು ನೀವು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಡುವದಿಲ್ಲ… ನಾವು…
ಶರಣಾಗಲು ಸಾವಿಗೇ ನೀವು
ಬರದ ಬೇಗೆಯ ಹಲವು
ವೃಷ್ಟಿ-ಅನಾವೃಷ್ಟಿಗಳೇ ಮುತ್ತಲಿ
ಆತಂಕಬೇಡ ನಾವಿರುವೆವು ನಿಮಗಾಗಿ

ಬೆಂಕಿ ಉಗುಳುತ ಚೆಲ್ಲಲಿ
ಧರೆಯೆ ದಹಿಸುತಲಿ…
ಎದೆಗುಂದಿ… ತಲೆಬಾಗದೆ
ಧೈರ್ಯ ಒಂದೆ ಸರ್ವಸಾಧನೆ
ಮೇರು ಸವಾಲು ಸ್ವೀಕಾರವಿರಲಿ
ಆತಂಕಬೇಡ ನಾವಿರುವೆವು ನಿಮಗಾಗ….

ಬದುಕು-ಗೆಲ್ಲುತಲಿ
ಜಗವೆಲ್ಲಾ ಗೆಲ್ಲಿರಿ…
ಆತ್ಮಹತ್ಯೆಯ ಆಲಿಂಗನದಿ
ಬಡತನದ ಭೂತಕ್ಕೆ ಬೆದರಿ
ಮರೀಚಿಕೆ ಸವಾರಿಬೇಡ
ಆತಂಕಬೇಡ… ನಾವಿರುವೆವು
ನಿಮಗಾಗಿ ಸದಾ… ನಿಮಗಾಗಿ

*****

 

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...