Home / ಕವನ / ಕವಿತೆ / ಅವಸರ ಬೇಡ

ಅವಸರ ಬೇಡ

ಬವಣೆಯ ಬದುಕು
ಭರವಸೆಯಲಿ ಸವೆಸುತ್ತಾ
ದುಡಿಮೆಯಲಿ ಕಾಲ ಕಳೆಯುತ್ತಾ
ತಿನ್ನುವ ಅನ್ನವ ತೊರೆದು
ಹೊರಟೆಯೇನಣ್ಣ ಆತ್ಮಹತ್ಯೆಗೆ
ಆತುರಬೇಡ… ಅವಸರಬೇಡ
ನಿನ್ನ ಒಡಲ ಕುಡಿಗಳಿಹರು
ಆತಂಕಬೇಡ ನಾವಿರುವೆವು ನಿಮಗಾಗಿ

ಹಸಿವೆ.. ಹರಿ ಹಾಯ್ದರೂ…
ನಾವೆಲ್ಲಾ… ಒಂದೊತ್ತಿನ
ಉಣ್ಣುವ ಊಟವು ಬಿಟ್ಟು
ಮೇಘನ ಮೇಲೆ ಆಣೆಯಿಟ್ಟು
ಬೇಡೋಣ ಭೂತಾಯಿ ಒಲವಿಗೆ
ಆತಂಕಬೇಡ ನಾವಿರುವೆವು ನಿಮಗಾಗಿ

ಹೋಗಿಯೇ… ಬಿಡಲಿ
ಅನುಕಂಪವಿರದೆ ಈ ದೇಹದ
ಆ ಒಂದು ಕ್ಷಣ ಉಸಿರು…
ಆಗಲಿ ಆವಾಗಲಾದರೂ
ಭೂಮಡಿಲ ಒಡಲು ಹಸಿರು
ಆತಂಕಬೇಡ ನಾವಿರುವೆವು ನಿಮಗಾಗಿ

ಬದುಕು ಬರಿ ಬರವಲ್ಲ
ಸುಡು ಬಿಸಿಲಿನಿ ಸಿಡೆಲೆಯಾದರೂ
ಬಿಡಲು-ಕೈಬಿಡಳು ಭೂಮಾತೆ
ತನ್ನ-ಕುಡಿಗಳಾಗಿರುವ…
ನಮ್ಮೆಲ್ಲರನ್ನೂ…. ಪೊರೆದವಳು
ಆತಂಕಬೇಡ… ನಾವಿರುವೆವು ನಿಮಗಾಗಿ

ಬೆಂಕಿ ಉಂಡೆಯ ಝಳದಲ್ಲೂ
ತಂಪನೆಯ ತಂಗಾಳಿ ಕಾಣುತ
ಮೈಕೊರೆವ ಮಾಗಿ ಚಳಿಯಲ್ಲೂ
ಬೆಚ್ಚಗಿನ ಬದುಕು ಅರಸಿದವರು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಸಿಲು-ಗಾಳಿ-ಮಳೆಯೆನ್ನದೆ
ಮೈ-ಕೈ ಒಡ್ಡಿ ಮುದಡದ
ಬೆಳೆದು… ಬಾಳಿದವು…
ನನ್ನೂರಿನ ಹೆಮ್ಮೆಯ ಸಿರಿಯುಳ್ಳ
ನಾಡಿನ ಸಾರ್ವಭೌಮರು ನೀವು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಡುವದಿಲ್ಲ… ನಾವು…
ಶರಣಾಗಲು ಸಾವಿಗೇ ನೀವು
ಬರದ ಬೇಗೆಯ ಹಲವು
ವೃಷ್ಟಿ-ಅನಾವೃಷ್ಟಿಗಳೇ ಮುತ್ತಲಿ
ಆತಂಕಬೇಡ ನಾವಿರುವೆವು ನಿಮಗಾಗಿ

ಬೆಂಕಿ ಉಗುಳುತ ಚೆಲ್ಲಲಿ
ಧರೆಯೆ ದಹಿಸುತಲಿ…
ಎದೆಗುಂದಿ… ತಲೆಬಾಗದೆ
ಧೈರ್ಯ ಒಂದೆ ಸರ್ವಸಾಧನೆ
ಮೇರು ಸವಾಲು ಸ್ವೀಕಾರವಿರಲಿ
ಆತಂಕಬೇಡ ನಾವಿರುವೆವು ನಿಮಗಾಗ….

ಬದುಕು-ಗೆಲ್ಲುತಲಿ
ಜಗವೆಲ್ಲಾ ಗೆಲ್ಲಿರಿ…
ಆತ್ಮಹತ್ಯೆಯ ಆಲಿಂಗನದಿ
ಬಡತನದ ಭೂತಕ್ಕೆ ಬೆದರಿ
ಮರೀಚಿಕೆ ಸವಾರಿಬೇಡ
ಆತಂಕಬೇಡ… ನಾವಿರುವೆವು
ನಿಮಗಾಗಿ ಸದಾ… ನಿಮಗಾಗಿ

*****

 

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...