Home / ಕವನ / ಕವಿತೆ / ಅವಸರ ಬೇಡ

ಅವಸರ ಬೇಡ

ಬವಣೆಯ ಬದುಕು
ಭರವಸೆಯಲಿ ಸವೆಸುತ್ತಾ
ದುಡಿಮೆಯಲಿ ಕಾಲ ಕಳೆಯುತ್ತಾ
ತಿನ್ನುವ ಅನ್ನವ ತೊರೆದು
ಹೊರಟೆಯೇನಣ್ಣ ಆತ್ಮಹತ್ಯೆಗೆ
ಆತುರಬೇಡ… ಅವಸರಬೇಡ
ನಿನ್ನ ಒಡಲ ಕುಡಿಗಳಿಹರು
ಆತಂಕಬೇಡ ನಾವಿರುವೆವು ನಿಮಗಾಗಿ

ಹಸಿವೆ.. ಹರಿ ಹಾಯ್ದರೂ…
ನಾವೆಲ್ಲಾ… ಒಂದೊತ್ತಿನ
ಉಣ್ಣುವ ಊಟವು ಬಿಟ್ಟು
ಮೇಘನ ಮೇಲೆ ಆಣೆಯಿಟ್ಟು
ಬೇಡೋಣ ಭೂತಾಯಿ ಒಲವಿಗೆ
ಆತಂಕಬೇಡ ನಾವಿರುವೆವು ನಿಮಗಾಗಿ

ಹೋಗಿಯೇ… ಬಿಡಲಿ
ಅನುಕಂಪವಿರದೆ ಈ ದೇಹದ
ಆ ಒಂದು ಕ್ಷಣ ಉಸಿರು…
ಆಗಲಿ ಆವಾಗಲಾದರೂ
ಭೂಮಡಿಲ ಒಡಲು ಹಸಿರು
ಆತಂಕಬೇಡ ನಾವಿರುವೆವು ನಿಮಗಾಗಿ

ಬದುಕು ಬರಿ ಬರವಲ್ಲ
ಸುಡು ಬಿಸಿಲಿನಿ ಸಿಡೆಲೆಯಾದರೂ
ಬಿಡಲು-ಕೈಬಿಡಳು ಭೂಮಾತೆ
ತನ್ನ-ಕುಡಿಗಳಾಗಿರುವ…
ನಮ್ಮೆಲ್ಲರನ್ನೂ…. ಪೊರೆದವಳು
ಆತಂಕಬೇಡ… ನಾವಿರುವೆವು ನಿಮಗಾಗಿ

ಬೆಂಕಿ ಉಂಡೆಯ ಝಳದಲ್ಲೂ
ತಂಪನೆಯ ತಂಗಾಳಿ ಕಾಣುತ
ಮೈಕೊರೆವ ಮಾಗಿ ಚಳಿಯಲ್ಲೂ
ಬೆಚ್ಚಗಿನ ಬದುಕು ಅರಸಿದವರು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಸಿಲು-ಗಾಳಿ-ಮಳೆಯೆನ್ನದೆ
ಮೈ-ಕೈ ಒಡ್ಡಿ ಮುದಡದ
ಬೆಳೆದು… ಬಾಳಿದವು…
ನನ್ನೂರಿನ ಹೆಮ್ಮೆಯ ಸಿರಿಯುಳ್ಳ
ನಾಡಿನ ಸಾರ್ವಭೌಮರು ನೀವು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಡುವದಿಲ್ಲ… ನಾವು…
ಶರಣಾಗಲು ಸಾವಿಗೇ ನೀವು
ಬರದ ಬೇಗೆಯ ಹಲವು
ವೃಷ್ಟಿ-ಅನಾವೃಷ್ಟಿಗಳೇ ಮುತ್ತಲಿ
ಆತಂಕಬೇಡ ನಾವಿರುವೆವು ನಿಮಗಾಗಿ

ಬೆಂಕಿ ಉಗುಳುತ ಚೆಲ್ಲಲಿ
ಧರೆಯೆ ದಹಿಸುತಲಿ…
ಎದೆಗುಂದಿ… ತಲೆಬಾಗದೆ
ಧೈರ್ಯ ಒಂದೆ ಸರ್ವಸಾಧನೆ
ಮೇರು ಸವಾಲು ಸ್ವೀಕಾರವಿರಲಿ
ಆತಂಕಬೇಡ ನಾವಿರುವೆವು ನಿಮಗಾಗ….

ಬದುಕು-ಗೆಲ್ಲುತಲಿ
ಜಗವೆಲ್ಲಾ ಗೆಲ್ಲಿರಿ…
ಆತ್ಮಹತ್ಯೆಯ ಆಲಿಂಗನದಿ
ಬಡತನದ ಭೂತಕ್ಕೆ ಬೆದರಿ
ಮರೀಚಿಕೆ ಸವಾರಿಬೇಡ
ಆತಂಕಬೇಡ… ನಾವಿರುವೆವು
ನಿಮಗಾಗಿ ಸದಾ… ನಿಮಗಾಗಿ

*****

 

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ